Advertisement

Ramanagara; ರೇಷ್ಮೆ ನೂಲು ಬಿಚ್ಚಣಿಕೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಕಾರ್ಮಿಕ ಸಾವು

07:56 PM Feb 17, 2024 | Team Udayavani |

ರಾಮನಗರ: ಬಾಯ್ಲರ್ ಸ್ಪೋಟಗೊಂಡು ಕಾರ್ಮಿಕ ಸಾವನ್ನಪ್ಪಿದ ಘಟನೆ ರಾಮನಗರದ ಟಿಪ್ಪು ಬಡಾವಣೆಯಲ್ಲಿ ನಡೆದಿದೆ.

Advertisement

ಸನಾ ಉಲ್ಲಾ ಖಾನ್ (63) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ರೇಷ್ಮೆ ನೂಲು ಬಿಚ್ಚಣಿಕೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ವ್ಯಕ್ತಿ ಸಾವನ್ನಪ್ಪಿದ್ದಾನೆ. ಅಕ್ರಮ್ ಪಾಷ ಎಂಬುವವರಿಗೆ ಸೇರಿದ ಕಾರ್ಖಾನೆಯಲ್ಲಿ ಇಂದು ಸಂಜೆ ಬಾಯ್ಲರ್ ಗೆ ಸೌದೆ ಹಾಕುವಾಗ ಸ್ಪೋಟಗೊಂಡಿದೆ. ಕಾರ್ಖಾನೆಯಲ್ಲಿ ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದು, ಸದ್ಯ ಬಾಯ್ಲರ್ ನಿಂದ ದೂರ ಇದ್ದ ಪರಿಣಾಮ, ಅಪಾಯದಿಂದ ಪಾರಾಗಿದ್ದಾರೆ‌.

ಇನ್ನೂ ಸ್ಥಳಕ್ಕೆ ರಾಮನಗರ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಈ ಸಂಬಂಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next