Advertisement

ನಾಳೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸುತ್ತಿಲ್ಲ ಬಿಗ್ ಬಿ! : ಕಾರಣ ಇಲ್ಲಿದೆ

10:05 AM Dec 23, 2019 | Hari Prasad |

ನವದೆಹಲಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ನಾಳೆ ರಾಷ್ಟ್ರ ರಾಜಧಾನಿಯಲ್ಲಿ ಪ್ರಸಕ್ತ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಭಾರತೀಯ ಚಿತ್ರರಂಗದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಭಾಜನರಾಗಿರುವ ಬಾಲಿವುಡ್ ಮೇರು ನಟ ಅಮಿತಾಬ್ ಬಚ್ಚನ್ ಅವರು ತಮ್ಮ ಪ್ರಶಸ್ತಿಯನ್ನು ಉಪರಾಷ್ಟ್ರಪತಿಗಳ ಕೈಯಿಂದ ನಾಳೆ ಪಡೆದುಕೊಳ್ಳಬೇಕಿತ್ತು.

Advertisement

ಆದರೆ ನಾಳೆ ಅಮಿತಾಬ್ ಅವರು ಈ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಅಂದರೆ ಬಿಗ್ ಬಿ ಅವರಿಗೆ ಈ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣ ಅವರು ಜ್ವರದಿಂದ ಬಳಲುತ್ತಿರುವುದು.

‘ನಾನು ಜ್ವರದಿಂದ ಬಳಲುತ್ತಿದ್ದೇನೆ ಮತ್ತು ಈ ಕಾರಣದಿಂದ ವೈದ್ಯರು ನನಗೆ ಪ್ರಯಾಣ ಮಾಡದಂತೆ ಸೂಚಿಸಿದ್ದಾರೆ… ಹಾಗಾಗಿ ನಾನು ನಾಳೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ.. ಇದು ತುಂಬಾ ದುರದೃಷ್ಟಕರ… ಇದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇನೆ’ ಎಂದು ಬಚ್ಚನ್ ಅವರು ತಮ್ಮ ಟ್ಟಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next