Advertisement

ಬಾಂಬ್ ನಿಷ್ಕ್ರಿಯ ದಳದಿಂದ ದಿಢೀರ್ ಶೋಧ

09:08 AM Aug 22, 2019 | Team Udayavani |

ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಬುಧವಾರ ಬೆಳಿಗ್ಗೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ನಡೆಸಿದ ತಪಾಸಣೆ ಸಾರ್ವಜನಿಕರನ್ನು ಅಚ್ಚರಿಯಲ್ಲಿ ಕೆಡವಿತು. ಚಿಕ್ಕಬಳ್ಳಾಪುರದಿಂದ ಆಗಮಿಸಿದ ಈ ತಂಡ ಬಸ್ ನಿಲ್ದಾಣದ ಪರಿಸರದಲ್ಲಿ ಸುಮಾರು ಒಂದು ಗಂಟೆಗಳಿಗೂ ಹೆಚ್ಚು ಕಾಲ ಶೋಧ ಕಾರ್ಯ ನಡೆಸಿತು.

Advertisement

ಇತ್ತೀಚೆಗೆ ರಾಜ್ಯದಲ್ಲಿ ಉಗ್ರರು ದಾಳಿ ನಡೆಸುವ ಸಾಧ್ಯತೆ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ್ದ ಎಚ್ವರಿಕೆಯ ಹಿನ್ನಲೆಯಲ್ಲಿ ಬಾಂಬ್ ನಿಷ್ಕ್ರಿಯ ದಳದ ಪೊಲೀಸರು ಬೇಟಿ ನೀಡಿ ತಪಾಸಣೆ ನಡೆಸಿದರು. ಪ್ರಯಾಣಿಕರನ್ನು ಕೂಡ ತಪಾಸಣೆಗೆ ಒಳಪಡಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಬಸವರಾಜ್ ಸ್ಥಳದಲ್ಲಿ ಹಾಜರಿದ್ದರು. ರಾಜ್ಯದ ಪ್ರಮುಖ ವಾಣಿಜ್ಯ ಕೇಂದ್ರವಾಗಿ ಚಿಂತಾಮಣಿಯು ರಾಜ್ಯದ ಗಮನ ಸೆಳೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next