Advertisement
ಮತ್ತೂಂದೆಡೆ ನಾಗರಾಜ್ಗಾಗಿ ಹುಡುಕಾಟ ಆರಂಭಿಸಿರುವ ಪೊಲೀಸರ ತಂಡ ಖಚಿತ ಮಾಹಿತಿ ಮೇರೆಗೆ ತಮಿಳುನಾಡಿನ ರಾಣಿಪೇಟ್ಗೆ ತೆರಳಿದೆ. ಆದರೆ, ಶನಿವಾರದವರೆಗೆ ಆರೋಪಿಗಳ ಲೋಕೇಶನ್ ರಾಣಿಪೇಟ್ನಲ್ಲಿ ಪತ್ತೆಯಾಗುತ್ತಿತ್ತು. ರವಿವಾರ ಬೇರೆಡೆಯೇ ತೋರಿಸುತ್ತಿದೆ. ಹೀಗೆ ನಿತ್ಯ ತನ್ನ ಸ್ಥಳವನ್ನು ಆರೋಪಿ ಬದಲಾಯಿಸಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮೂಲತಃ ತಮಿಳುನಾಡಿನ ಧರ್ಮಪುರಿ ಜಿಲ್ಲೆಯವನಾದ ನಾಗರಾಜ್ ಸ್ಥಳೀಯ ಕೆಲವು ಉದ್ಯಮಿಗಳ ಸಂಪರ್ಕ ಬೆಳೆಸಿಕೊಂಡಿದ್ದ. ಹಾಗೆಯೇ ಕೆಲವು ಬ್ಲ್ಯಾಕ್ ಆ್ಯಂಡ್ ವೈಟ್ ದಂಧೆಕೋರರ ಜತೆಯೂ ವ್ಯವಹಾರ ನಡೆಸುತ್ತಿದ್ದ. ಹಾಗಾಗಿ ಡಿಸೆಂಬರ್ನಿಂದಲೇ ಈತ ಅಮಾನ್ಯಗೊಂಡ ನೋಟುಗಳ ಬದಲಾವಣೆಯಲ್ಲಿ ತೊಡಗಿದ್ದ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ರಾಜಕೀಯ ಮುಖಂಡರು, ಉದ್ಯಮಿಗಳ ಕಪ್ಪು ಹಣವನ್ನು ಶೇ. 25ರಷ್ಟು ಕಮಿಷನ್ ಆಧಾರದ ಮೇಲೆ ಬದಲಾವಣೆ ಮಾಡಿಕೊಡುತ್ತಿದ್ದ. ನೋಟುಗಳ ಬದಲಾವಣೆಗೆ ಬಂದ ಉದ್ಯಮಿಗಳಿಗೆ ಬೆದರಿಸಿ ಸಂಗ್ರಹಿಸಿಟ್ಟಿದ್ದ ಕೋಟ್ಯಂತರ ರೂ. ಹಳೆ ನೋಟುಗಳನ್ನು ತಮಿಳುನಾಡಿನ ಶಿಪ್ಯಾರ್ಡ್ಗಳಿಗೆ ಕೊಂಡೊಯ್ದು ಅಂತಾರಾಜ್ಯ ದಂಧೆಕೋರರ ಮೂಲಕ ಶೇ. 30ರಷ್ಟು ಕಮಿಷನ್ಗೆ ಬದಲಾವಣೆ ಮಾಡಿಕೊಳ್ಳುತ್ತಿದ್ದ. ಇದಕ್ಕಾಗಿಯೇ ತಮಿಳುನಾಡು ಹಾಗೂ ರಾಜ್ಯದ ಬಹಳಷ್ಟು ಜನ ಅನಿವಾಸಿ ಭಾರತೀಯರನ್ನು ಸಂಪರ್ಕಿಸಿ ಅವರಿಗೂ ಶೇಕಡಾ ಪ್ರಮಾಣದಲ್ಲಿ ಕಮಿಷನ್ ಕೊಡುತ್ತಿದ್ದರು ಎಂದು ಮೂಲಗಳು ತಿಳಿಸಿವೆ. ವಕೀಲರ ಸಂಪರ್ಕ
ಪೊಲೀಸರ ಬಂಧನಕ್ಕೂ ಮೊದಲೇ ನಿರೀಕ್ಷಣಾ ಜಾಮೀನು ಪಡೆಯಲು ತನ್ನ ಸಂಬಂಧಿಕರ ಮೂಲಕ ವಕೀಲರನ್ನು ಸಂಪರ್ಕಿಸಿದ್ದಾನೆ ಎನ್ನಲಾಗಿದೆ. ಆದರೆ, ಈಗಾಗಲೇ ಆರೋಪಿ ನಾಗನ ಪ್ರತಿ ಚಲನವಲನಗಳ ಬಗ್ಗೆ ನಿಗಾವಹಿಸಿರುವ ಪೊಲೀಸರು ಸದ್ಯದಲ್ಲೇ ಆತನನ್ನು ಬಂಧಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Related Articles
ನಾಗರಾಜ್ನ ಪತ್ತೆಗಾಗಿ ತೀವ್ರ ಹುಡುಕಾಟ ಆರಂಭಿಸಿರುವ ಪೊಲೀಸರ ಕಾರ್ಯಾಚರಣೆ ಕಂಡು ಆತಂಕ್ಕೊಳಗಾಗಿರುವ ನಾಗ ನಿರಂತರವಾಗಿ ಹಿರಿಯ ಪೊಲೀಸ್ ಅಧಿಕಾರಿಗಳ ಸಂಪರ್ಕದಲ್ಲಿದ್ದಾನೆ. ಮೂಲಗಳ ಪ್ರಕಾರ ಎ. 20ರಂದು ನಗರಕ್ಕೆ ಬಂದು ತಾನೇ ಪೊಲೀಸರಿಗೆ ಶರಣಾಗುತ್ತೇನೆಂದು ಕೇಳಿಕೊಂಡಿದ್ದಾನೆ ಎನ್ನಲಾಗಿದೆ.
Advertisement