Advertisement

Politics: “ಬಾಂಬೆ ಬಾಯ್ಸ” ಕಾಂಗ್ರೆಸ್‌ಗೆ ಹೋಗಲಾರರು: ಕೋಟ

11:38 PM Aug 16, 2023 | Team Udayavani |

ಶಿವಮೊಗ್ಗ: ಬಿಜೆಪಿ ಸೇರಿರುವ “ಬಾಂಬೆ ಬಾಯ್ಸ’ ಮತ್ತೆ ಕಾಂಗ್ರೆಸ್ಸಿಗೆ ಹೋಗಲ್ಲ. ಬಿಜೆಪಿ ಚಿಹ್ನೆಯಿಂದ ಗೆದ್ದವರು ಬಿಎಸ್‌ವೈ ಮತ್ತು ಬೊಮ್ಮಾಯಿ ಸರಕಾರದಲ್ಲಿ ಮಂತ್ರಿಗಳಾಗಿದ್ದರು. ಅವರು ಯಾವ ಕಾರಣಕ್ಕೂ ಮತ್ತೆ ಕಾಂಗ್ರೆಸ್‌ ಸೇರ್ಪಡೆ ಆಗುವುದಿಲ್ಲ. ಗಟ್ಟಿಧ್ವನಿಯಲ್ಲಿ ಶಾಸಕ ಮುನಿರತ್ನ ಅವರೇ ಉತ್ತರ ನೀಡಿದ್ದಾರೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾಭಾವಿಕವಾಗಿ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ಸಿಗೆ ಬರುವುದಾಗಿ ಕಾಂಗ್ರೆಸ್‌ ನಾಯಕರು ಹೇಳಿದ್ದಾರೆ. ಅಲ್ಲಿರುವ 30ಕ್ಕೂ ಹೆಚ್ಚು ಶಾಸಕರು ತಮ್ಮ ಸರಕಾರದಲ್ಲಿ ಯಾವುದೇ ಲಾಭವಾಗುವುದಿಲ್ಲ ಎಂದು ಸಹಿ ಹಾಕಿ ಸಿಎಂ ಸಿದ್ದರಾಮಯ್ಯರಿಗೆ ಕೊಟ್ಟಿದ್ದಾರೆ. ಬಸವರಾಜ ರಾಯರಡ್ಡಿ ಅತ್ಯಂತ ನೋವಾಗಿದೆ ಎಂದು ಹೇಳಿರುವುದು. ಈ ಎಲ್ಲ ಹಿನ್ನೆಲೆಯಲ್ಲಿ ಸರಕಾರಕ್ಕೆ ಸ್ಥಿರತೆ ಇಲ್ಲ ಎಂದು ಯತ್ನಾಳ್‌ ಹೇಳಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next