Advertisement

ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್‌ಗೆ ಬರುತ್ತಾರೆ: ಸತೀಶ್ ಜಾರಕಿಹೊಳಿ ಬಾಂಬ್

06:16 PM Feb 13, 2022 | Team Udayavani |

ದಾವಣಗೆರೆ: ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ ಎಂದು ಕೆಪಿಸಿಸಿ ಕಾರ್‍ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಬಾಂಬೆ ಬಾಯ್ಸ್ ಮತ್ತೆ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ. ಆ ಬಗ್ಗೆ ಪಕ್ಷದ ವರಿಷ್ಠರು ಮಾತನಾಡುತ್ತಾರೆ. ರಾಜಕೀಯ ಅಂದರೆ ಇದೆಲ್ಲ ಮಾಮೂಲು. ಅಲ್ಲಿದ್ದವರು ಇಲ್ಲಿ ಇರುತ್ತಾರೆ. ಇಲ್ಲಿ ಇದ್ದವರು ಅಲ್ಲಿ ಇರುತ್ತಾರೆ ಎಂದರು.

ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋದವರು ಮತ್ತೆ ನಮ್ಮ ಪಕ್ಷಕ್ಕೆ ಬಂದೇ ಬರುತ್ತಾರೆ. ಇನ್ನೂ ಒಂದು ವರ್ಷ ಕಾಲಾವಕಾಶವಿದೆ ಎಂದರು.

ಸಿದ್ದರಾಮಯ್ಯಕಾಂಗ್ರೆಸ್‌ನಲ್ಲಿ ನಿಶ್ಯಕ್ತ ನಾಯಕ ಎಂಬ ಸಿ.ಎಂ. ಇಬ್ರಾಹಿಂ ಹೇಳಿಕೆಗೆ ರಾಜ್ಯದಲ್ಲಿ ಸಿದ್ದರಾಮಯ್ಯ ಅವರಿಗೆ ಅವರದ್ದೇ ಆದ ವರ್ಚಸ್ಸು ಇದೆ. ಅವರು ಪಕ್ಷದಲ್ಲಿ ನಿಶಕ್ತರಾಗುವ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಕಾಂಗ್ರೆಸ್‌ನ ನಂಬರ್ ಒನ್ ನಾಯಕ. ಮಾಸ್ ಲೀಡರ್ ಮಾತ್ರವಲ್ಲ ಟಾಪ್‌ ಮೋಸ್ಟ್ ನಾಯಕ ಎನ್ನುವ ಮೂಲಕ ಸಿ.ಎಂ. ಇಬ್ರಾಹಿಂಗೆ ಭರ್ಜರಿ ಟಾಂಗ್ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next