Advertisement

ಸಾಲ ಮಂಜೂರಾತಿಯಲ್ಲಿ ಅಕ್ರಮ ಪ್ರಕರಣ: ಚಂದಾ ಕೊಚ್ಚರ್‌ ದಂಪತಿ ಬಿಡುಗಡೆಗೆ ಬಾಂಬೆ ಹೈಕೋರ್ಟ್‌ ಆದೇಶ

12:06 PM Jan 09, 2023 | Team Udayavani |

ಮುಂಬಯಿ: ವೀಡಿಯೋಕಾನ್‌ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಆರೋಪದಡಿ ಬಂಧಿತರಾಗಿದ್ದ ಐಸಿಐಸಿಐ ಬ್ಯಾಂಕ್‌ ಮಾಜಿ ಸಿಇಒ ಚಂದಾ ಕೊಚ್ಚರ್‌, ಪತಿ ದೀಪಕ್‌ ಕೊಚ್ಚರ್‌ ಅವರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಸೋಮವಾರ (ಜ.9 ರಂದು) ಆದೇಶಿಸಿದೆ.

Advertisement

ಸಿಬಿಐ ಈ ಪ್ರಕರಣದಲ್ಲಿ ನಮ್ಮನ್ನು ಅಕ್ರಮವಾಗಿ ಬಂಧಿಸಿದೆ ಎಂದು ಆರೋಪಿಸಿ  ಚಂದಾ ಕೊಚ್ಚರ್‌, ಪತಿ ದೀಪಕ್‌ ಕೊಚ್ಚರ್‌ ಅವರು ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದೇಶವನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ಕಾಯ್ದಿರಿಸಿತ್ತು.

ಸೋಮವಾರ ಬಾಂಬೆ ಹೈಕೋರ್ಟ್‌ “ಕಾನೂನಿಗೆ ಅನುಗುಣವಾಗಿ ಬಂಧಿಸಲಾಗಿಲ್ಲ” ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದ್ದು,  1 ಲಕ್ಷ ರೂಪಾಯಿ ಬಾಂಡ್ ಮೇಲೆ ದಂಪತಿಯನ್ನು ನ್ಯಾಯಾಂಗ ಬಂಧನದಿಂದ ಬಿಡುಗಡೆ ಮಾಡಲು ಆದೇಶ ನೀಡಿದೆ.

ಡಿ.23 ರಂದು ಐಸಿಐಸಿಐ ಬ್ಯಾಂಕ್ – ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್‌ನ ಮಾಜಿ ಎಂಡಿ ಮತ್ತು ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಅವರನ್ನು ಸಿಬಿಐ ಬಂಧಿಸಿ, ನ್ಯಾಯಾಂಗ ಬಂಧನದಲ್ಲಿ ಇರಿಸಿತ್ತು.

ಘಟನೆ ಹಿನ್ನೆಲೆ:

Advertisement

ಐಸಿಐಸಿಐ ಬ್ಯಾಂಕ್‌ನಿಂದ 3,250 ಕೋಟಿ ರೂ. ಸಾಲ ಪಡೆದ ಕೆಲವು ತಿಂಗಳಲ್ಲೇ ವಿಡಿಯೊಕಾನ್‌ ಗ್ರೂಪ್‌ನ ವೇಣುಗೋಪಾಲ್‌, ನ್ಯೂಪವರ್‌ ರಿನ್ಯೂವಬಲ್ಸ್‌ ಕಂಪೆನಿಯಲ್ಲಿ ಕೋಟ್ಯಂತರ ರೂ. ಹೂಡಿಕೆ ಮಾಡಿದ್ದರು. ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡಲೆಂದೇ ಇತರೆ ಆರೋಪಿಗಳ ಜತೆ ಸೇರಿಕೊಂಡು ಚಂದಾ ಕೊಚ್ಚರ್‌ ಖಾಸಗಿ ಕಂಪೆನಿಗೆ ಸಾಲ ಮಂಜೂರು ಮಾಡಿದ್ದಾರೆ ಎಂದು ಸಿಬಿಐ ಆರೋಪಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next