Advertisement

ಅರ್ನಾಬ್ ವಿಚಾರಣೆ ಮುಂದೂಡಿಕೆ : ಮಹಾರಾಷ್ಟ್ರ ವಿಧಾನಸಭಾ ಕಾರ್ಯದರ್ಶಿಗೆ ಸುಪ್ರೀಂ ನೋಟೀಸ್

07:32 PM Nov 06, 2020 | sudhir |

ಮುಂಬೈ: ಆತ್ಮಹತ್ಯೆಗೆ ಪ್ರಚೋದನೆಗೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ರಿಪಬ್ಲಿಕ್‌ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್‌ ಗೋಸ್ವಾಮಿಗೆ ಶುಕ್ರವಾರವೂ ಸಿಕ್ಕಿಲ್ಲ.

Advertisement

ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಶನಿವಾರವೂ ಮುಂದುವರಿಯಲಿದೆ. ಸದ್ಯ ಅವರು ನ.18ರ ವರೆಗೆ ನ್ಯಾಯಾಂಗ ವಶದಲ್ಲಿದ್ದಾರೆ.

ಇದೇ ವೇಳೆ ಮಹಾರಾಷ್ಟ್ರ ವಿಧಾನಸಭೆಯ ಕಾರ್ಯದರ್ಶಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಅ.13ರಂದು ಹಕ್ಕುಚ್ಯುತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೆದ ಪತ್ರಕ್ಕೆ ಕೋರ್ಟ್‌ ತೀವ್ರ ಆಕ್ಷೇಪ ಮಾಡಿದೆ. ಕಾರ್ಯದರ್ಶಿ ವಿರುದ್ಧ ನ್ಯಾಯಾಂಗ ನಿಂದನೆ ಕೇಸು ಯಾಕೆ ದಾಖಲಿಸಬಾರದು ಎಂದು ಪ್ರಶ್ನೆ ಮಾಡಿದೆ. ಎರಡು ವಾರಗಳಲ್ಲಿ ಉತ್ತರ ನೀಡುವಂತೆ ಅವರಿಗೆ ತಾಕೀತು ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next