Advertisement

Panaji: ಸಮನ್ಸ್ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್‍ನ ಗೋವಾ ಪೀಠ

03:48 PM Feb 06, 2024 | Team Udayavani |

ಪಣಜಿ: ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಮ್ಹಾಪ್ಸಾ ನ್ಯಾಯಾಲಯ ರದ್ದುಪಡಿಸಿದ್ದ ಸಮನ್ಸ್ ಬಾಂಬೆ ಹೈಕೋರ್ಟ್‍ನ ಗೋವಾ ಪೀಠ ಕೂಡ ಫೆ. 6 ಮಂಗಳವಾರ ರದ್ದುಗೊಳಿಸಿದೆ.

Advertisement

ಆಮ್ ಆದ್ಮಿ ಪಕ್ಷದ ಗೋವಾ ಮುಖ್ಯಸ್ಥ ಅಮಿತ್ ಪಾಲೇಕರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಕೇಜ್ರಿವಾಲ್‍ಗೆ ಸಮನ್ಸ್ ಜಾರಿ ಮಾಡಲಾಗಿತ್ತು. 2017ರ ಗೋವಾ ವಿಧಾನಸಭಾ ಚುನಾವಣೆ ವೇಳೆ ಕೇಜ್ರಿವಾಲ್ ವಿರುದ್ಧ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಮ್ಹಾಪ್ಸಾ ನ್ಯಾಯಾಲಯ ಅವರಿಗೆ ನೀಡಿದ್ದ ಸಮನ್ಸ್ ರದ್ದುಗೊಳಿಸಿದೆ ಎಂದು ಅಮಿತ್ ಪಾಲೇಕರ್ ತಿಳಿಸಿದ್ದಾರೆ.

ಪ್ರಜಾಪ್ರತಿನಿಧಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 171 (ಇ) ಅಡಿಯಲ್ಲಿ ಸಲ್ಲಿಸಲಾದ ಚಾರ್ಜ್ ಶೀಟ್‍ಗೆ ಸಂಬಂಧಿಸಿದಂತೆ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ, ಮ್ಹಪ್ಸಾ ನ್ಯಾಯಾಲಯವು ಕೇಜ್ರಿವಾಲ್‍ಗೆ ಸಮನ್ಸ್ ನೀಡಿತ್ತು. ಕಳೆದ ವರ್ಷ ನವೆಂಬರ್‍ ನಲ್ಲಿ ಕೇಜ್ರಿವಾಲ್‍ಗೆ ಜೆಎಂಎಫ್‍ಸಿ ಸಮನ್ಸ್ ನೀಡಿತ್ತು. ಸಮನ್ಸ್ ವಿರುದ್ಧ ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ಕೋರಲಾಗಿತ್ತು ಎಂದು ಪಾಲೇಕರ್ ತಿಳಿಸಿದ್ದಾರೆ.

ಗೋವಾ ಪೀಠ ಸಮನ್ಸ್ ರದ್ದುಗೊಳಿಸಿ ಈ ಪ್ರಕರಣವನ್ನು ಮರುಪರಿಶೀಲನೆಗಾಗಿ ಮ್ಹಪ್ಸಾ ನ್ಯಾಯಾಲಯಕ್ಕೆ ಕಳುಹಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next