Advertisement

ಭಾರತ ನಮ್ಮ ಹೆಮ್ಮೆ ಎಂದು ಪಠ್ಯಕ್ಕೆ ಸೇರಿದ್ದೇವೆ, ಇದರಲ್ಲಿ ತಪ್ಪೇನು?: ಸಚಿವ ಅಶೋಕ್

02:24 PM Jun 23, 2022 | Team Udayavani |

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರು ಪತ್ರ ಬರೆದ ಬೆನ್ನಲ್ಲೇ ವಿಧಾನಸೌಧದಲ್ಲಿ ಆರ್.ಅಶೋಕ್ ನೇತೃತ್ವದಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸಲಾಗಿದೆ.

Advertisement

ಸಚಿವರಾದ ಆರ್.ಅಶೋಕ್, ಸಿ.ಸಿ ಪಾಟೀಲ್, ಬೈರತಿ ಬಸವರಾಜ್, ಶಿವರಾಂ ಹೆಬ್ಬಾರ್, ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ಆದರೆ ಜಂಟಿ ಸುದ್ದಿಗೋಷ್ಟಿಯಿಂದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ದೂರ ಉಳಿದಿದ್ದಾರೆ.

ಸಚಿವ ಅಶೋಕ್ ಮಾತನಾಡಿ, ಇತಿಹಾಸದಲ್ಲಿ ಯಾವತ್ತೂ ಪಠ್ಯ ಪುಸ್ತಕ ಪರಿಷ್ಕರಣೆ ಇಷ್ಟೊಂದು ಚರ್ಚೆ, ವಾದ-ವಿವಾದ ಆಗಿರಲಿಲ್ಲ. ಕೆಲವು ಸಾಹಿತಿಗಳಿಗೆ ಹಿಡನ್ ಅಜೆಂಡಾ ಇರುತ್ತದೆ. ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ಈ ಹಿಂದೆ ಪಠ್ಯಪರಿಷ್ಕರಣೆಯಾಗಿತ್ತು. ಅಲ್ಪಸಂಖ್ಯಾತರ ಓಲೈಕೆಗಾಗಿ ಪರಿಷ್ಕರಣೆ ಮಾಡಿದ್ದರು. ಹಿಂದೂ ಪದಗಳನ್ನು ತೆಗದು ಹಾಕಿದ್ದರು. ರಾಮ, ಶಿವನ ಹೆಸರು ತೆಗದು ಹಾಕಿದ್ದರು. ಮೈಸೂರು ರಾಜ, ಒಡೆಯರನ್ನು ಸಿದ್ದರಾಮಯ್ಯ ಸರ್ಕಾರ  ಕಡೆಗಣನೆ ಮಾಡಿತ್ತು. ಟಿಪ್ಪು ಕಂಡರೆ ಸಿದ್ದರಾಮಯ್ಯ ರವರಿಗೆ ಅದೇನೋ ಪ್ರೀತಿ. ಟಿಪ್ಪು ಅಂದರೆ ಸಾಕು ಸಿದ್ದರಾಮಯ್ಯಗೆ ಮೈಮೇಲೆ ಬಂದಹಾಗೆ ಆಡುತ್ತಾರೆ ಎಂದರು.

ಸಿದ್ದರಾಮಯ್ಯ ಸರ್ಕಾರದಲ್ಲಿ ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಕ್ರೈಸ್ತ, ಮುಸ್ಲಿಂ ಆರಾಧನಾ ಸ್ಥಳಗಳನ್ನು ಉಳಿಸಿಕೊಂಡು, ದೇವಾಲಯದ ಚಿತ್ರಗಳನ್ನ ಕೈ ಬಿಟ್ಟಿದ್ದರು. ಹಿಂದೂಗಳ ಕಡೆಗಣನೆ ಮಾಡಿ ಮುಸಲ್ಮಾನರ ಓಲೈಕೆ ಮಾಡಲಾಗಿತ್ತು. ಸಿದ್ದರಾಮಯ್ಯ ಅವಧಿಯಲ್ಲಿ ಶಿವಾಜಿಯನ್ನು ಕಡೆಗಣಿಸಲಾಗಿತ್ತು. ರಜಪೂತರ ಗುಣ ಧರ್ಮಗಳನ್ನು ಕಡೆಗಣಿಸಿದ್ದರು. ಮೊಘಲರ ಇತಿಹಾಸಕ್ಕೆ ಹೆಚ್ಚು ಗಮನ ಕೊಟ್ಟು ರಜಪೂತರ ಬಗ್ಗೆ ಇದ್ದ ವಿವರಗಳನ್ನು ಬರಗೂರು ಸಮಿತಿ ಕಡಿತಗೊಳಿಸಿತ್ತು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಸಿದ್ದರಾಮಯ್ಯ ಸರ್ಕಾರ ಕುವೆಂಪು ಪಠ್ಯವನ್ನು ಎಂಟು ಇದ್ದಿದ್ದು ಏಳು ಮಾಡಿತ್ತು. ನಮ್ಮ ಸರ್ಕಾರ ಹತ್ತು ಅಧ್ಯಾಯಗಳನ್ನು ಸೇರಿಸಿದೆ. ನಾವೆಲ್ಲಿ ತಪ್ಪು ಮಾಡಿದ್ದೇವೆ ಹೇಳಿ? ಭಾರತ ನಮ್ಮ ಹೆಮ್ಮೆ ಎಂದು ಆರನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಸೇರಿಸಿದ್ದೇವೆ. ಇದರಲ್ಲಿ ತಪ್ಪೇನಿದೆ? ಕೆ .ಸ್ ನರಸಿಂಹಸ್ವಾಮಿರವರ ಭಾರತೀಯತೆ ಕವನವನ್ನು ಸೇರಿಸಿದ್ದೇವೆ. ಸ್ವಾತಂತ್ರ್ಯ ಹೋರಾಟಗಾರರಾದ ನಿಟ್ಟೂರು ಶ್ರೀನಿವಾಸರಾಯರ ಪಾಠ ಮರು ಸೇರ್ಪಡೆ ಮಾಡಿದ್ದೇವೆ. ಚೆನ್ನಾಭೈರಾದೇವಿ ಕನ್ನಡ ರಾಣಿಯ ಬಗ್ಗೆ ಪಠ್ಯ, ಏಣಗಿ ಬಾಳಪ್ಪನವರ ಜೀವನ ಪರಿಚಯವನ್ನು ಮರು ಸೇರ್ಪಡೆ ಮಾಡಿದ್ದೇವೆ. ವಿವೇಕಾನಂದರ ಜನ್ಮದಿನದ ಕುರಿತ ಪಠ್ಯ ಸೇರ್ಪಡೆ ಮಾಡಲಾಗಿದೆ. ಎಸ್.ಎಲ್.ಭೈರಪ್ಪ ಬರೆದ ಯಾವುದೇ ಪಠ್ಯ ಪುಸ್ತಕ ಇರಲಿಲ್ಲ. 9ನೇ ತರಗತಿಯ ಪಠ್ಯದಲ್ಲಿ ನಾನು ಕಂಡಂತೆ ಬಿಜಿಎಲ್ ಸ್ವಾಮಿ ಎಂಬ ಬರಹವನ್ನು ಸೇರಿಸಿದ್ದೇವೆ. ಸನಾತನ ಧರ್ಮ ಪಾಠವನ್ನು 8ನೇ ತರಗತಿಯ ಸಮಾಜ ವಿಜ್ಞಾನದಲ್ಲಿ ಸೇರಿಸಿದ್ದೇವೆ. ಮಂಜೇಶ್ವರ್ ಗೋವಿಂದ ಪೈ ಬರಹ ಮರು ಸೇರ್ಪಡೆ ಮಾಡಿದ್ದೇವೆ ಎಂದರು.

Advertisement

ಇದನ್ನೂ ಓದಿ:13,940 ಮೊಳೆಗಳಲ್ಲಿ ಕಲಾಕೃತಿ; ಇಂಡಿಯಾ ಬುಕ್ ಆಫ್ ರೆರ್ಕಾಡ್ಸ್‌ ಗೆ ದಾಖಲಾದ ಕಾಪುವಿನ ಶಶಾಂಕ್

ಬರಗೂರು ಸಮಿತಿಯವರು ಮೊಘಲರು, ದೆಹಲಿ ಸುಲ್ತಾನರ ಬಗ್ಗೆ ವಿಷಯ ಹೆಚ್ಚಿತ್ತು. ನಮ್ಮ‌ ನೆಲದ ರಾಜರ ಪರಿಚಯ ಹಿಂದಿನ ಪಠ್ಯಪುಸ್ತಕಗಳಲ್ಲಿ ಇರಲಿಲ್ಲ. ಕ್ರೈಸ್ತ, ಇಸ್ಲಾಂ ಧರ್ಮವನ್ನು ಪಾಶ್ಚಾತ್ಯ ಧರ್ಮಗಳ ಪಾಠ ಬದಲಾಯಿಸಿ ಯಹೂದಿ, ಪಾರ್ಸಿ ಧರ್ಮಗಳನ್ನು ವಿಷಯಗಳನ್ನು ಸೇರಿಸಿದ್ದೇವೆ ಎಂದು ಅಶೋಕ್ ಹೇಳಿದರು.

ಕೆಪಿಸಿಸಿ ಅದ್ಯಕ್ಷ ಡಿಕೆಶಿ ಪುಸ್ತಕ ಹರಿದ ವಿಚಾರವಾಗಿ ಮಾತನಾಡಿದ ಸಚಿವ ಅಶೋಕ್, ಡಿಕೆ ಶಿವಕುಮಾರ್ ಕೆಂಪೇಗೌಡ ಇತಿಹಾಸ ಇರುವ ಪುಸ್ತಕ ಹರಿದು ಹಾಕಿದ್ದರು. ನಾವು ಕೆಂಪೇಗೌಡ ಇತಿಹಾಸವನ್ನು ಪುಸ್ತಕಕ್ಕೆ ಸೇರಿಸಿದ್ದೇವೆ. ಅದನ್ನು ಹರಿದು ಹಾಕಿದ್ದು ಎಷ್ಟು ಸರಿ? ನಾರಾಯಣ ಗುರು, ಭಗತ್ ಸಿಂಗ್ ಪಠ್ಯವನ್ನೂ ಕೈ ಬಿಟ್ಟಿಲ್ಲ. ಕಾಂಗ್ರೆಸ್ ನವರು ಸುಳ್ಳು ಹೇಳುತ್ತಿದ್ದಾರೆ. ನಾವು ನಮ್ಮ‌ ದೇಶದ ಸಂಸ್ಕೃತಿಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸಿದ್ದೇವೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next