Advertisement

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

02:13 PM Aug 04, 2021 | Team Udayavani |

ಯಾದಗಿರಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಯ ಬಿಜೆಪಿಯ ವೆಂಕಟರೆಡ್ಡಿ ಮುದ್ನಾಳ ಹಾಗೂ ಮಾಜಿ ಸಚಿವ ರಾಜುಗೌಡ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ.

Advertisement

ಇದೀಗ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಸಂಪುಟದಲ್ಲಿ ಜಿಲ್ಲೆಯ ವೆಂಕಟರೆಡ್ಡಿ ಮುದ್ನಾಳ ಇಲ್ಲವೇ ರಾಜು ಗೌಡರಿಗೆ ಸಚಿವ ಸ್ಥಾನ ನೀಡಬೇಕೆಂದು ಬೆಂಬಲಿಗರು ಒತ್ತಾಯಿಸಿದರು.

ರಾಜುಗೌಡ ಬೆಂಬಲಿಗರು ಬೆಂಗಳೂರಿಗೆ ತೆರಳಿ ತಮ್ಮ ನಾಯಕರಿಗೆ ಮಂತ್ರಿಸ್ಥಾನ ಸಿಕ್ಕೆ ಸಿಗುತ್ತದೆ ಎಂಬ ಹುಮ್ಮಸ್ಸಿನಲ್ಲಿ ಸಂಭ್ರಮೋತ್ಸವದ ತಯಾರಿಯಲ್ಲಿ ತೊಡಗಿದ್ದರು, ಇದೀಗ ಮತ್ತೆ ಗಡಿ ಜಿಲ್ಲೆಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ.

ಬಿಜೆಪಿಯಿಂದ ಮೂರು ಬಾರಿ ಶಾಸಕರಾಗಿದ್ದ ರಾಜುಗೌಡ ಹಿಂದೆ ಸಚಿವರಾಗಿಯೂ ಸೇವೆ ಸಲ್ಲಿಸಿದರು ಆದರೆ ಅವರಿಗೆ ಸಚಿವ ಸ್ಥಾನ ಕೈತಪ್ಪಿದು, ಕಾರ್ಯಕರ್ತರಲ್ಲಿ ಸಾಕಷ್ಟು ಬೇಸರ ಮೂಡಿಸಿದೆ.

ಇದನ್ನೂ ಓದಿ :ಜೋನ್‌ ಸಾವು ಲಾಕಪ್‌ ಡೆತ್‌ ಅಲ್ಲ; ಬಂಧಿತ ಐವರಲ್ಲಿ ಒಬ್ಬ ಡ್ರಗ್ಸ್‌ ವ್ಯಸನಿ

Advertisement
Advertisement

Udayavani is now on Telegram. Click here to join our channel and stay updated with the latest news.

Next