Advertisement

ಕಮಿಷನ್ ಪಡೆಯುವ ಮೂಲಕ ಬೊಮ್ಮಾಯಿ ಸರ್ಕಾರ ಹೊಸ ಮೈಲಿಗಲ್ಲು ಸಾಧಿಸಿದೆ: ರಣದೀಪ್ ಸುರ್ಜೇವಾಲ

01:23 PM Apr 12, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ 40% ಕಮಿಷನ್ ಪಡೆಯುವ ಮೂಲಕ ಭ್ರಷ್ಟಾಚಾರದಲ್ಲಿ ಹೊಸ ಮೈಲುಗಲ್ಲು ಸಾಧಿಸಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಟೀಕಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಮು ಗಲಭೆಗಳ ಮೂಲಕ ಬೊಮ್ಮಾಯಿ ಅವರು ಅಡಗಿ ಕುಳಿತು ಕೊಳ್ಳುತ್ತಿರುವುದು ಯಾಕೆ? ಬೊಮ್ಮಾಯಿ ಅವರು ಹಾಗೂ ಬಿಜೆಪಿಯ ಗೂಂಡಾಗಳು ಅಲ್ಪಸಂಖ್ಯಾತರ ವಿರುದ್ಧ ನಿತ್ಯ ದಾಳಿ ಮಾಡುತ್ತಿದ್ದು, ಮುಖ್ಯಮಂತ್ರಿಯವರು, ಬಿಜೆಪಿ ಹಾಗೂ ಬಜರಂಗದಳದವರು, ಪಿಎಫ್ ಐ, ಸಿಎಫ್ ಐ ಹಾಗೂ ಎಸ್ ಡಿಪಿಐ ಜತೆ ಸೇರಿಕೊಂಡು ರಾಜ್ಯದಲ್ಲಿ ದಿನನಿತ್ಯ ಬಿಗುವಿನ ವಾತಾವರಣ ಸೃಷ್ಟಿಸುತ್ತಿದೆ. ಆದರೆ ಬೊಮ್ಮಾಯಿ ತಮ್ಮ ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪದ ಬಗ್ಗೆ ಸ್ಪಷ್ಟ ಉತ್ತರ ನೀಡಿಲ್ಲ ಎಂದು ಆರೋಪಿಸಿದರು.

ಇದನ್ನೂ ಓದಿ:ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಉಡುಪಿಯಲ್ಲಿ ಆತ್ಮಹತ್ಯೆ!

ಈ ಸರ್ಕಾರದಲ್ಲಿ ಬಹುತೇಕ ಸಚಿವರು ಕಳಂಕಿತರು. ಕೆಲವರು ಜಾಮೀನಿನ ಮೇಲೆ ಹೊರಗಿದ್ದರೆ, ಮತ್ತೆ ಕೆಲವರು ಜಾಮೀನಿನ ನಿರೀಕ್ಷಣೆಯಲ್ಲಿದ್ದಾರೆ. ಅವರನ್ನು ವಜಾಗೊಳಿಸಬೇಕು. ಒಂದು ವೇಳೆ ವಜಾಗೊಳಿಸದಿದ್ದರೆ ಬೊಮ್ಮಾಯಿ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next