Advertisement

ಬೊಮ್ಮಾಯಿ ರಾಜೀನಾಮೆ ಖಚಿತ: ಡಿಕೆಶಿ

11:57 PM Nov 29, 2021 | Team Udayavani |

ವಿಜಯಪುರ: ರಾಜ್ಯ ಬಿಜೆಪಿ ಸರಕಾರದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆ ಖಚಿತ. ಈ ಹಿಂದೆ ಯಡಿಯೂರಪ್ಪ ಮೇಲೆ ವಿಶ್ವಾಸ ಕಳೆದುಕೊಂಡರೆಂದು ರಾಜೀನಾಮೆ ಪಡೆಯಲಾಯಿತು.

Advertisement

ಅನಂತರ ಅಧಿಕಾರಕ್ಕೆ ಬಂದ ಬಸವರಾಜ ಬೊಮ್ಮಾಯಿ ಸರಕಾರದ ಮೇಲೂ ಅವರದೇ ಸಚಿವರು ಇದೀಗ ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಹೀಗಾಗಿ ಬೊಮ್ಮಾಯಿ ಕೂಡ ರಾಜೀನಾಮೆ ಕೊಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರಕಾರದ ಭ್ರಷ್ಟಾಚಾರ, ಆಡಳಿತ ಯಂತ್ರದ ಕುಸಿತದ ಕುರಿತು ಕಾಂಗ್ರೆಸ್‌ ನಾಯಕರೇನೂ ಮಾತನಾಡುತ್ತಿಲ್ಲ. ಬದಲಾಗಿ ಬೊಮಾಯಿ ಸರಕಾರದಲ್ಲಿರುವ ಸಚಿವರೇ ಮಾತನಾಡುತ್ತಿದ್ದಾರೆ. ಇತರ ಸಚಿವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಸಚಿವ ಮುರುಗೇಶ ನಿರಾಣಿ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ಸಿಎಂ ಬದಲಾವಣೆ ವಿಚಾರ ನಾನು ಮಾತನಾಡುವುದಿಲ್ಲ, ನಿರಾಣಿ ಮುಂದಿನ ಸಿಎಂ ಎಂದು ಹೇಳಿದ ಸಚಿವರೇ ಈ ಬಗ್ಗೆ ಹೇಳಬೇಕು ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next