Advertisement

Cauvery ತೀರದಲ್ಲಿ ಅಸ್ಥಿ ವಿಸರ್ಜನೆ: ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

01:05 AM Jul 30, 2024 | Team Udayavani |

ಬೆಂಗಳೂರು: ಕಾವೇದಿ ನದಿ ದಂಡೆಯಲ್ಲಿ ಅಸ್ಥಿ ವಿಸರ್ಜನೆ ಸೇರಿ ಸ್ನಾನ, ಶೌಚ ಸಹಿತ ಇತರ ಮಾಲಿನ್ಯಕಾರಕ ಚಟುವಟಿಕೆಗೆ ನಿರ್ಬಂಧ ಹೇರುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ಈ ವಿಚಾರವಾಗಿ ಬೆಂಗಳೂರು ನಿವಾಸಿ ವಕೀಲ ಕುಶಾಲ್‌ ಕುಮಾರ್‌ ಕೌಶಿಕ್‌ ಸೇರಿ 6 ಮಂದಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಹಾಗೂ ನ್ಯಾ. ಕೆ.ವಿ.ಅರವಿಂದ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು.

ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಮಂಡ್ಯ ಜಿಲ್ಲಾಧಿಕಾರಿ, ಮಂಡ್ಯ ಉಪ ವಿಭಾಗಾಧಿಕಾರಿ, ಶ್ರೀರಂಗಪಟ್ಟಣ ತಹಶೀಲ್ದಾರ್‌, ಶ್ರೀರಂಗಪಟ್ಟಣ ನಗರಸಭೆಗೆ ನೋಟಿಸ್‌ ಜಾರಿಗೊಳಿಸಿತು. ಅರ್ಜಿ ಆಕ್ಷೇಪಣೆ ಸಲ್ಲಿಸಲು ಎಲ್ಲ ಪ್ರತಿವಾದಿಗಳಿಗೆ ಸೂಚಿಸಿ ವಿಚಾರಣೆಯನ್ನು ಸೆಪ್ಟಂಬರ್‌ 11ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next