Advertisement

ಬೋನಿಗೆ ಬಿದ್ದ ಹೆಣ್ಣು ಚಿರತೆ

04:40 PM Feb 01, 2021 | Team Udayavani |

ಗಂಗಾವತಿ: ತಾಲೂಕಿನ ವಿರೂಪಾಪೂರ ಗಡ್ಡಿಯ ಋಷಿಮುಖ ಪರ್ವತ ಪ್ರದೇಶದಲ್ಲಿರಿಸಿದ್ದ ಬೋನಿಗೆ 3 ವರ್ಷದ ಹೆಣ್ಣು ಚಿರತೆ ಬಿದ್ದಿದೆ. ಆನೆಗೊಂದಿ ಭಾಗದಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಈಗಾಗಲೇ ಇಬ್ಬರು ಯುವಕರನ್ನು ಚಿರತೆಗಳು ಕೊಂದು ಹಾಕಿವೆ.

Advertisement

ಅರಣ್ಯ ಇಲಾಖೆಯವರು ಚಿರತೆಗಳನ್ನು ಸೆರೆ ಹಿಡಿಯಲು ಆನೆಗೊಂದಿ, ಹನುಮನಹಳ್ಳಿ, ಸಾಣಾಪೂರ ಜಂಗ್ಲಿರಂಗಾಪೂರ, ಅಂಜನಾದ್ರಿ ಬೆಟ್ಟ ಪ್ರದೇಶದಲ್ಲಿ ಸಿಸಿ ಕ್ಯಾಮರಾ ಮತ್ತು ಬೋನ್‌ ಇಟ್ಟಿದ್ದಾರೆ. ಈಗಾಗಲೇ ಆದಿಶಕ್ತಿ ದೇಗುಲ ಬೆಟ್ಟ ಪ್ರದೇಶದಲ್ಲಿರಿಸಿದ್ದ ಬೋನಿಗೆ ಎರಡು ಚಿರತೆಗಳು ಬಿದ್ದಿದ್ದು, ರವಿವಾರ ಬೋನಿಗೆ ಬಿದ್ದ ಚಿರತೆ ಸಿಸಿ ಕ್ಯಾಮರಾದಲ್ಲಿ ಕಾಣಿಸಿಕೊಂಡಿತ್ತು.

ಇದನ್ನೂ ಓದಿ:ಪ್ರತಿ ಮನೆಗೆ ಕುಡಿವ ನೀರಿನ ವ್ಯವಸ್ಥೆ

ಸೆರೆ ಸಿಕ್ಕ ಚಿರತೆಯನ್ನು ವೈದ್ಯಕೀಯ ಪರೀಕ್ಷೆಯ ನಂತರ ಬೇರೆ ಸ್ಥಳ ಅಥವಾ ಪ್ರಾಣಿ ಸಂಗ್ರಹಾಲಯಕ್ಕೆ ಬಿಡುವ ಕುರಿತು ಮೇಲಾಧಿ  ಕಾರಿಗಳ ಆದೇಶ ಪಾಲನೆ ಮಾಡಲಾಗುತ್ತದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next