Advertisement

ಬೂತ್‌ ಮಟ್ಟದಿಂದ ಪಕ್ಷ ಸದೃಢಗೊಳಿಸಿ

07:58 PM Mar 04, 2021 | Team Udayavani |

ಯಾದಗಿರಿ: ಬರುವ ತಾಪಂ-ಜಿಪಂ ಚುನಾವಣೆಗಳಿಗೆ ಎಲ್ಲರೂ ಸಮರೋಪಾದಿಯಲ್ಲಿ ಪಕ್ಷವನ್ನು ಬೂತ್‌ ಮಟ್ಟದಲ್ಲಿ ಸದೃಢಗೊಳಿಸಬೇಕು ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಸಲಹೆ ನೀಡಿದರು.

Advertisement

ಯಾದಗಿರಿ ನಗರ ಮಂಡಲ ವತಿಯಿಂದ ವೀರಶೈವ ಕಲ್ಯಾಣ ಮಂಟಪದಲ್ಲಿ ನಗರ ಮಂಡಲ ಪ್ರಮುಖರ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಪ್ರಶಿಕ್ಷಣ ಅಭ್ಯಾಸ ವರ್ಗ ಬಿಜೆಪಿ ಸಂಸ್ಕೃತಿ, ತತ್ವಾದರ್ಶ ಹಾಗೂ ಸಿದ್ಧಾಂತಗಳ ಪ್ರತೀಕವಾಗಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರಡ್ಡಿ ಮಾತನಾಡಿ, ಹಿರಿಯ ನೇತಾರರು ಕಟ್ಟಿ ಬೆಳೆಸಿದ ಪಕ್ಷದಲ್ಲಿ ನಾವೆಲ್ಲ ಸುವರ್ಣ ಯುಗದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದ್ದೇವೆ. ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಿ ವಿಸ್ತಾರಗೊಳಿಸುವ ಪ್ರಕ್ರಿಯೆಯಲ್ಲಿ ಕಾರ್ಯಕರ್ತನನ್ನು ಬೆಳೆಸುವ ಹೊಣೆ ನಮ್ಮೆಲ್ಲರದ್ದಾಗಿದೆ ಎಂದರು.

ಈ ವೇಳೆ ನಗರ ಮಂಡಲ ಅಧ್ಯಕ್ಷ ಸುರೇಶ್‌ ಅಂಬೀಗೆರ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್‌, ನಗರಾಭಿವೃದ್ಧಿ ಪ್ರಾ ಧಿಕಾರ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಮಾಲಿಪಾಟೀಲ್‌, ನಗರಸಭೆ ಸದಸ್ಯ ಹನುಮಂತ ಇಟಗಿ, ಖಂಡಪ್ಪ ದಾಸನ, ಶರಣಗೌಡ ಬಾಡಿಯಾಳ, ವೀಣಾ ಮೋದಿ, ಪ್ರಶಿಕ್ಷಣ ಪ್ರಕೋಷ್ಠ ಜಿಲ್ಲಾ ಸಂಚಾಲಕರಾದ ಭೀಮರಾಯ ಜಂಗಳಿ, ಸಹ ಸಂಚಾಲಕ ನರೇಶ್‌ ಗೋಂಗ್ಲೆ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next