Advertisement

ಕುತೂಹಲಕ್ಕೆ ತೆರೆ; ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ಪ್ರಮಾಣವಚನ ಸ್ವೀಕಾರ

03:51 PM May 18, 2018 | Sharanya Alva |

ಬೆಂಗಳೂರು: ವಿಧಾನಸಭೆಯಲ್ಲಿ ಶನಿವಾರ ನಡೆಯಲಿರುವ ವಿಶ್ವಾಸಮತ ಯಾಚನೆ ವೇಳೆ ಹಂಗಾಮಿ ಸ್ಪೀಕರ್ ಯಾರಾಗಬೇಕೆಂಬ ಕುತೂಹಲಕ್ಕೆ ತೆರೆಬಿದ್ದಿದ್ದು, ಕೆಜಿ ಬೋಪಯ್ಯ ಅವರು ರಾಜಭವನದಲ್ಲಿ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Advertisement

ರಾಜ್ಯಪಾಲ ವಜೂಬಾಯಿವಾಲಾ ಅವರು ಬೋಪಯ್ಯ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದರು. ವಿಆರ್ ವಾಲಾ ಅವರು ಬೋಪಯ್ಯನವರಿಗೆ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.

ನಾಳೆ ಬಿಜೆಪಿ ಬಹುಮತ ಸಾಬೀತುಪಡಿಸುವ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಉಮೇಶ್ ಕತ್ತಿ ಅಥವಾ ಕಾಂಗ್ರೆಸ್ ಪಕ್ಷದ ಶಾಸಕ ಆರ್ ವಿ ದೇಶಪಾಂಡೆ ಹಂಗಾಮಿ ಸ್ಪೀಕರ್ ಆಗಿ ನೇಮಕವಾಗುವ ಸಾಧ್ಯತೆ ಇದೆ ಎಂದು ಊಹಿಸಲಾಗಿತ್ತು.

ಈ ಹಿಂದೆ ವಿಧಾನಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದ ಬಿಜೆಪಿಯ ಕೆಜಿ ಬೋಪಯ್ಯ ಅವರು ಹಂಗಾಮಿ ಸ್ಪೀಕರ್ ಹುದ್ದೆಯನ್ನು ಶನಿವಾರ ನಿಭಾಯಿಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next