Advertisement

ಹಂಗಾಮಿ ಸ್ಪೀಕರ್‌ ಆಗಿ ಬೋಪಯ್ಯ: ಸುಪ್ರೀಂನಲ್ಲಿ ಕಾಂಗ್ರೆಸ್‌ ಪ್ರಶ್ನೆ

07:33 PM May 18, 2018 | Team Udayavani |

ಹೊಸದಿಲ್ಲಿ : ನಾಳೆ ಶನಿವಾರ ರಾಜ್ಯ ವಿಧಾನ ಸಭೆಯ ಸದನದಲ್ಲಿ  ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಂದ ನಡೆಯಲಿರುವ ನಿರ್ಣಾಯಕ ವಿಶ್ವಾಸ ಮತ ಯಾಚನೆಯ ಪ್ರಕ್ರಿಯೆಯನ್ನು ನೆರವೇರಿಸಲು ರಾಜ್ಯಪಾಲ ವಜುಭಾಯಿ ವಾಲಾ ಅವರಿಂದ ನಡೆದಿರುವ ಹಂಗಾಮಿ ಸ್ಪೀಕರ್‌ ಆಗಿ ಕೆ ಜಿ ಬೋಪಯ್ಯ ಅವರು ನೇಮಕಾತಿಯನ್ನು ಕಾಂಗ್ರೆಸ್‌ ಪಕ್ಷ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿದೆ.

Advertisement

ಈ ಸಂಬಂಧ ಕಾಂಗ್ರೆಸ್‌ ಪರವಾಗಿ ಹಿರಿಯ ವಕೀಲರಾದ ಕಪಿಲ್‌ ಸಿಬಲ್‌ ಮತ್ತು ಅಭಿಷೇಕ್‌ ಮನು ಸಿಂಘವಿ ಅವರು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ಪ್ರಕರಣದ ತುರ್ತು ವಿಚಾರಣೆಯನ್ನು ಕೋರಿದ್ದಾರೆ.

ಸುಪ್ರೀಂ ಕೋರ್ಟ್‌ ರಿಜಿಸ್ಟ್ರಾರರು ಕಾಂಗ್ರೆಸ್‌ ಅರ್ಜಿಯನ್ನು ಸ್ವೀಕರಿಸಿದ್ದಾರೆ. ವರಿಷ್ಠ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿ ಆದೇಶ ನೀಡುವ ನಿರೀಕ್ಷೆ ಇದೆ ವರದಿಗಳು ತಿಳಿಸಿವೆ. 

Advertisement

Udayavani is now on Telegram. Click here to join our channel and stay updated with the latest news.

Next