Advertisement

ನಿಮ್ಮ ನಿರ್ಗಮನದಿಂದ ಬೇಸರ

06:00 AM Nov 22, 2018 | |

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಅವರು ಅನಾರೋಗ್ಯದ ಕಾರಣ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಸೇರಿದಂತೆ ಅನೇಕ ಮಂದಿ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ. “ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಹೇಳುವುದಾದರೆ, ಸುಷ್ಮಾ ಸ್ವರಾಜ್‌ ಅವರು ಸಂಸತ್‌ನಿಂದ ನಿರ್ಗಮಿಸುತ್ತಿರುವುದಕ್ಕೆ ಬೇಸರವಾಗುತ್ತಿದೆ. ಅವರ ಟ್ವಿಪ್ಲೊಮೆಸಿಯನ್ನು ನಾನು ಯಾವತ್ತೂ ಗೌರವಿಸುತ್ತೇನೆ’ ಎಂದು ತರೂರ್‌ ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಸುಷ್ಮಾ ಪ್ರತಿಕ್ರಿಯಿಸಿದ್ದು, “ನಿಮ್ಮ ಒಳ್ಳೆಯ ಮಾತುಗಳಿಗಾಗಿ ಧನ್ಯವಾದ ಶಶಿ’ ಎಂದು ಹೇಳಿದ್ದಾರೆ. ಇದೇ ವೇಳೆ, ಮತ್ತೂಬ್ಬರ ಟ್ವೀಟ್‌ಗೆ ಪ್ರತಿಕ್ರಿಯಿಸಿದ ಸುಷ್ಮಾ, “ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುತ್ತಿದ್ದೇನೆ, ರಾಜಕೀಯದಿಂದ ದೂರವಾಗುತ್ತಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next