Advertisement

Bengaluru: ಆರ್‌.ಆರ್‌.ನಗರದ ಹೇರೋಹಳ್ಳಿ ಮುಖ್ಯ ರಸ್ತೆಯಲ್ಲೇ ಕೊಳವೆ ಬಾವಿ! 

11:22 AM Oct 08, 2024 | Team Udayavani |

ಬೆಂಗಳೂರು: ಸಾರ್ವಜನಿಕರು ಓಡಾಡುವ ಮುಖ್ಯರಸ್ತೆ ಯಲ್ಲಿ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಿದ ಘಟನೆ ಬಿಬಿಎಂಪಿ ವ್ಯಾಪ್ತಿಯ ಆರ್‌.ಆರ್‌.ನಗರದಲ್ಲಿ ನಡೆದಿದೆ.

Advertisement

ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪಾಲಿಕೆಯ ವಲಯ ಅಧಿಕಾರಿಗಳು, ಕೊಳವೆ ಬಾವಿ ಕೊರೆಸಿದವರ ಹಾಗೂ ಬೋರ್‌ವೆಲ್‌ ಕೊರೆಯುವ ವಾಹನದ ಮೇಲೆ ಕಾನೂನ ಕ್ರಮ ಕೈಗೊಳ್ಳಲು ಮಾಗಡಿ ಮುಖ್ಯ ರಸ್ತೆಯ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪಾಲಿಕೆ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ಆರ್‌.ಆರ್‌.ನಗರ ವಲಯದಲ್ಲಿ ರಸ್ತೆಯ ಮಧ್ಯೆ ಅನಧಿಕೃತವಾಗಿ ಕೊಳವೆ ಬಾವಿ ಕೊರೆಸಿರುವ ಮಾಹಿತಿ ಇದೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಿಸಲಾಗಿದೆ. ತಪಿತಸ್ಥರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಹೇರೋಹಳ್ಳಿ ವಾರ್ಡ್‌ನಲ್ಲಿ ಘಟನೆ:  ಪಾಲಿಕೆಯ ಹೇರೋ ಹಳ್ಳಿ ವಾರ್ಡ್‌ನ ವೀರಭದ್ರೇಶ್ವರ ನಗರದ ನಗರ ಓಂ ಸಾಯಿ ಪಬ್ಲಿಕ್‌ ಮುಖ್ಯ ರಸ್ತೆಯಲ್ಲಿ ಅ.4ರಂದು ಬಿಬಿಎಂಪಿ ಅನುಮತಿ ಪಡೆ ಯ ದೆ ಅನಧಿಕೃತವಾಗಿ ಕೊಳವೆ ಬಾವಿ ಕೊರೆಯಲಾಗಿದೆ. ಈ ಸಂಬಂಧ ಪಾಲಿಕೆಗೆ ದೂರು ಬಂದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಡಾಂಬರು ರಸ್ತೆ ಹಾಳು ಮಾಡಿದ ಹಿನ್ನೆಲೆಯಲ್ಲಿ ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಆರ್‌.ಆರ್‌.ನಗರ ಪಾಲಿಕೆ ವಲಯ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next