Advertisement

ಎರಡೂ ಕ್ಷೇತ್ರ ಗೆಲ್ಲಲು ಕಾಂಗ್ರೆಸ್‌ ಮುಖಂಡರಿಗೆ ತಾಕೀತು

06:45 AM Apr 29, 2019 | Team Udayavani |

ಬೆಂಗಳೂರು: ಎರಡು ಕ್ಷೇತ್ರಗಳ ಉಪ ಚುನಾವಣೆಯನ್ನು ಕಡ್ಡಾಯವಾಗಿ ಗೆಲ್ಲಲೇಬೇಕು ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ರಾಜ್ಯ ಕಾಂಗ್ರೆಸ್‌ ಮುಖಂಡರಿಗೆ ತಾಕೀತು ಮಾಡಿದ್ದಾರೆ.

Advertisement

ಲೋಕಸಭೆ ಚುನಾವಣೆಯ ಸೋಲು, ಗೆಲುವಿನ ಕುರಿತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ಭಾನುವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಸಭೆ ನಡೆಸಿದರು.

ಸಚಿವರು ನೀಡಿರುವ ಮಾಹಿತಿ ಆಧಾರದಲ್ಲಿ ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಇದರ ಜೊತೆಗೆ ಎರಡೂ ಉಪ ಚುನಾವಣೆಗಳನ್ನು ಕಡ್ಡಾಯವಾಗಿ ಗೆಲ್ಲಲೇಬೇಕು ಎಂದು ಇಬ್ಬರೂ ಉಸ್ತುವಾರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರಿಗೆ ವೇಣುಗೋಪಾಲ್‌ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಭೆಯ ನಂತರ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಲೋಕಸಭೆ ಚುನಾವಣೆ ಮುಗಿದ ನಂತರ ಸಭೆ ಸೇರಿದ್ದೆವು. ಎಷ್ಟು ಸ್ಥಾನ ಗೆಲ್ಲಬಹುದು ಎನ್ನುವ ಬಗ್ಗೆ ಚರ್ಚೆ ಮಾಡಿದ್ದೇವೆ. ರಾಜ್ಯದಲ್ಲಿ ಮೈತ್ರಿ ಪಕ್ಷಗಳು 20 ಸ್ಥಾನ ಗೆಲ್ಲುವ ವಿಶ್ವಾಸವಿದೆ. ಮಾಧ್ಯಮಗಳಲ್ಲಿ ಮೋದಿ ಅಲೆ ಇದೆ. ಆದರೆ, ತಳಮಟ್ಟದಲ್ಲಿ ಬೇರೆ ಅಲೆ ಇದೆ. ಅದು ಕಾಂಗ್ರೆಸ್‌ ಪರವಾಗಿದೆ. ಚುನಾವಣಾ ಫ‌ಲಿತಾಂಶ ನೋಡಿದ ಮೇಲೆ ಎಲ್ಲವೂ ಗೊತ್ತಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next