Advertisement
ಪಟ್ಟಣದ ಮಿನಿ ವಿಧಾನಸೌಧಕ್ಕೆ ಪ್ರತಿ ದಿನ ತಾಲೂಕಿನ ನೂರಾರು ಜನರು ನಾನಾ ಕೆಲಸದ ನಿಮಿತ್ತ ಬರುತ್ತಾರೆ. ಆದರೆ ಇಲ್ಲಿಗೆ ಬರುವ ಜನರಿಗೆ ತಾಲೂಕಾಡಳಿತ ನೀರಿನ ವ್ಯವಸ್ಥೆ ಬಗ್ಗೆ ತಲೆಕಡೆಸಿಕೊಂಡಿಲ್ಲ. ಅಧಿಕಾರಿಗಳು ಬದಲಾದರೂ ಕೂಡ ವ್ಯವಸ್ಥೆಗಳು ಮಾತ್ರ ಬದಲಾಗುತ್ತಿಲ್ಲ.
Related Articles
Advertisement
ಮಿನಿ ವಿಧಾನಸೌದ ತಹಶೀಲ್ದಾರ ಕಚೇರಿ, ಭೂ ಸರ್ವೇ ಇಲಾಖೆ, ಭೂಮಿ ಕೇಂದ್ರ, ಖಜಾನೆ ಇಲಾಖೆ, ಉಪ ನೋಂದಣೆ ಇಲಾಖೆ, ದಾಖಲೆಗಳ ಇಲಾಖೆ, ಚುನಾವಣಾ ಕಚೇರಿಗಳಿಗೆ ಪ್ರತಿನಿತ್ಯ ಗ್ರಾಮೀಣ ಭಾಗ ಸೇರಿದಂತೆ ಪಟ್ಟಣದ ಜನರು ಇಲ್ಲಿಗೆ ಬರುತ್ತಾರೆ. ಕುಡಿಯುವ ನೀರಿನ ಸಮಸ್ಯೆ ಜತೆಗೆ ಶೌಚಾಲಯ ಸಮಸ್ಯೆ ಹೆಚ್ಚಿದೆ. ಕಚೇರಿ ಹಿಂದುಗಡೆ ಕಳೆದ ಸುಮಾರು ವರ್ಷಗಳಿಂದ ಸಾರ್ವಜನಿಕ ಶೌಚಾಲಯ ನಿರ್ಮಿಸಲಾಗಿದೆ. ಅನೇಕ ಬಾರಿ ಬಣ್ಣ ಹಚ್ಚುವ ಕೆಲಸ ಮಾಡಿ ಅನುದಾನ ಖರ್ಚು ಮಾಡಲಾಗಿದೆ. ಆದರೆ ಇಂದಿಗೂ ಕೂಡ ಬಾಗಿಲು ತೆರೆಯದೆ ಸಾರ್ವಜನಿಕರ ಉಪಯೋಗಕ್ಕೆ ಬಾರದಂತಾಗಿದ್ದು, ಅಧಿಕಾರಿಗಳು ಹಾಗೂ ರಾಜಕಾರಣಿಗಳಿಗೆ ಜನರು ಹಿಡಿ ಶಾಪ ಹಾಕುತ್ತಿದ್ದಾರೆ.
ಇದನ್ನೂ ಓದಿ: ಶಿಕ್ಷಕರ ಸಮಸ್ಯೆ-ಬೇಡಿಕೆಗಳ ಬಗ್ಗೆ ಸರಕಾರ ಉದಾಸೀನ ಮಾಡಬಾರದು: ಕುಮಾರಸ್ವಾಮಿ
ಜನರಿಗೆ ಮೂಲ ಸೌಕರ್ಯ ಕಲ್ಪಿಸಿ
ವಿವಿಧ ಕೆಲಸಕಾರ್ಯಗಳಿಗೆ ತಾಲೂಕು ಕಚೇರಿಗೆ ಬರುವ ಜನರಿಗೆ ತಾಲೂಕು ಆಡಳಿತ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಹಾಗೂ ಶೌಚಾಲಯದ ವ್ಯವಸ್ಥೆಗೆ ಮೊದಲ ಆದ್ಯತೆ ನೀಡಬೇಕು. ದೇಶದ ಪ್ರಧಾನಿಗಳು ಶೌಚಾಲಯದ ಕುರಿತು ಅಭಿಯಾನಗಳು ನಡೆಸುತ್ತಿದ್ದರೂ ಕೂಡ ಅಧಿಕಾರಿಗಳು ಮಾತ್ರ ಸಾರ್ವಜನಿಕರ ಶೌಚಾಲಯದ ಕಡೆಗೆ ಗಮನಹರಿಸದಿರುವುದು ಬೇಸರ ಮೂಡಿಸಿದೆ. ಕೂಡಲೇ ಸೂಕ್ತ ವ್ಯವಸ್ಥೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಮಿನಿವಿಧಾನಸೌಧ ಎದುರಿಗೆ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಗುವುದು. –ಅವಿನಾಶ ಧುಮಾಳೆ ಜಯ ಕರ್ನಾಟಕ ಜನಪರ ವೇದಿಕೆ ತಾಲೂಕು ಉಪಾಧ್ಯಕ್ಷರು.
-ದುರ್ಯೋಧನ ಹೂಗಾರ