ರಾಜ್ಯ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ, ಕೇಂದ್ರ ಕಾನೂನು ಇಲಾಖೆ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ
ಮುಂದೂಡಿತು. ಎವಿಎಂ ಮತ ಎಣಿಕೆ ಮಾಡಿದ ಬಳಿಕ ಆಯೋಗ, ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಆಯಾ ಬೂತ್ಮಟ್ಟದಲ್ಲಿ ಪಡೆದ ಮತಗಳ ಸಂಖ್ಯೆಯನ್ನು ಪ್ರಕಟಗೊಳಿಸಲಾಗುತ್ತಿದೆ. ಇದರಿಂದಾಗಿ ಕಡಿಮೆ ಮತ ಪಡೆದಿರುವ ಬೂತ್ನ ಪ್ರದೇಶವನ್ನು ಆಯ್ಕೆಯಾಗಿರುವ ಜನಪ್ರತಿನಿಧಿಗಳು, ರಾಜಕೀಯ ಪಕ್ಷಗಳು ಕಡೆಗಣಿಸಬಹುದು. ಹೀಗಾಗಿ, ಮುಕ್ತ ಹಾಗೂ ಪಾರದರ್ಶಕ ಚುನಾವಣೆಗಾಗಿ 100 ಇವಿಎಂ ಯಂತ್ರಗಳಲ್ಲಿ ದಾಖಲಾದ ಮತಗಳ ಸಂಖ್ಯೆಯನ್ನು ಒಟ್ಟಾಗಿ ಪ್ರಕಟಿಸಬೇಕು ಎಂದು ಕೇಂದ್ರ ಕಾನೂನು ಆಯೋಗ ಮಾಡಿದ್ದ ಶಿಫಾರಸ್ಸನ್ನು ಆಯೋಗ ಜಾರಿಗೊಳಿಸಬೇಕು. ಮುಂಬರುವ ಲೋಕಸಭೆ ಇನ್ನಿತರ ಚುನಾವಣೆಗಳಲ್ಲಿ ಬೂತ್ಮಟ್ಟದ ಮತಗಳನ್ನು ಪ್ರತ್ಯೇಕವಾಗಿ ಪ್ರಕಟಿಸದಂತೆ ನಿರ್ದೇಶಿಸಬೇಕು ಎಂದು ಅವರು ಕೋರಿದ್ದಾರೆ.
Advertisement