Advertisement

ಶಿವಸೇನೆಯ ಚಿಹ್ನೆ ಕದ್ದೊಯ್ದ ಕಳ್ಳರಿಗೆ ಪಾಠ ಕಲಿಸುತ್ತೇವೆ: ಶಿಂಧೆ ವಿರುದ್ಧ ಉದ್ಧವ್ ಕಿಡಿ

03:54 PM Feb 18, 2023 | Team Udayavani |

ಮುಂಬಯಿ : ಪಕ್ಷದ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಕದ್ದಿದ್ದಾರೆ ಮತ್ತು ಕಳ್ಳನಿಗೆ ತಕ್ಕ ಪಾಠ ಕಲಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಗುರಿಯಾಗಿಸಿಕೊಂಡು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಶನಿವಾರ ಕಿಡಿ ಕಾರಿದ್ದಾರೆ.

Advertisement

ಪಕ್ಷದ ನಾಯಕರ ಸಭೆಯ ಅಧ್ಯಕ್ಷತೆ ವಹಿಸುವ ಮೊದಲು ಇಲ್ಲಿನ ಬಾಂದ್ರಾದಲ್ಲಿರುವ ತಮ್ಮ ನಿವಾಸ ‘ಮಾತೋಶ್ರೀ’ ಹೊರಗೆ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಠಾಕ್ರೆ , “ಬಿಲ್ಲು ಮತ್ತು ಬಾಣವನ್ನು ಕಳವು ಮಾಡಲಾಗಿದೆ. ಕಳ್ಳನಿಗೆ ತಕ್ಕ ಪಾಠ ಕಲಿಸಬೇಕು. ಆತ ಸಿಕ್ಕಿಬಿದ್ದಿದ್ದಾನೆ. ನಾನು ಕಳ್ಳನಿಗೆ ಬಿಲ್ಲು ಮತ್ತು ಬಾಣದೊಂದಿಗೆ ಮೈದಾನಕ್ಕೆ ಬರುವಂತೆ ಸವಾಲು ಹಾಕುತ್ತೇನೆ ಮತ್ತು ನಾವು ಅದನ್ನು ಉರಿಯುತ್ತಿರುವ ಪಂಜಿನಿಂದ ಎದುರಿಸುತ್ತೇವೆ ಎಂದು ಠಾಕ್ರೆ ಹೇಳಿದರು.

ಠಾಕ್ರೆಗೆ ಅವರಿಗೆ ದೊಡ್ಡ ಹೊಡೆತ ಎಂಬಂತೆ ಚುನಾವಣಾ ಆಯೋಗವು ಶುಕ್ರವಾರ ‘ಶಿವಸೇನೆ’ ಮತ್ತು ಅದರ ಚುನಾವಣಾ ಚಿಹ್ನೆ ‘ಬಿಲ್ಲು ಮತ್ತು ಬಾಣ’ವನ್ನು ಸಿಎಂ ಶಿಂಧೆ ನೇತೃತ್ವದ ಗುಂಪಿಗೆ ಹಂಚಿಕೆ ಮಾಡಿದೆ.1966ರಲ್ಲಿ ಬಾಳ್ ಠಾಕ್ರೆ ಅವರು ಮಣ್ಣಿನ ಪುತ್ರರಿಗೆ ನ್ಯಾಯ ಎಂಬ ತತ್ವದಡಿ ಸ್ಥಾಪಿಸಿದ ಪಕ್ಷದ ಮೇಲೆ ಠಾಕ್ರೆ ಕುಟುಂಬದ ಹಿಡಿತ ತಪ್ಪಿದ್ದು ಇದೇ ಮೊದಲ ಬಾರಿಯಾಗಿದೆ.

ಹೆಚ್ಚಿನ ಸಂಖ್ಯೆಯ ಠಾಕ್ರೆ ನಿಷ್ಠಾವಂತರು ‘ಮಾತೋಶ್ರೀ’ ಹೊರಗೆ ಜಮಾಯಿಸಿ ಶಕ್ತಿ ಪ್ರದರ್ಶನದಲ್ಲಿ ಏಕನಾಥ್ ಶಿಂಧೆ ವಿರುದ್ಧ ಮತ್ತು ಠಾಕ್ರೆ ಅವರನ್ನು ಬೆಂಬಲಿಸಿ ಘೋಷಣೆಗಳನ್ನು ಕೂಗಿದರು.

Advertisement

Udayavani is now on Telegram. Click here to join our channel and stay updated with the latest news.

Next