Advertisement

ಹೊಟ್ಟೆ ನೋವಿನಿಂದ ಕ್ವಾರಂಟೈನ್ ನಲ್ಲಿದ್ದ ಬಾಲಕ ಸಾವು

12:25 PM Jun 04, 2020 | sudhir |

ರಾಯಚೂರು‌: ಜಿಲ್ಲೆಯ ದೇವದುರ್ಗದ ಕ್ವಾರಂಟೈನ್ ನಲ್ಲಿದ್ದ ಬಾಲಕ‌ ಹೊಟ್ಟೆ ನೋವು ಬಾಧೆ ತಾಳದೆ ಮೃತಪಟ್ಟ ಘಟನೆ ಗುರುವಾರ ಬೆಳಗಿನ ಜಾವ ಜರುಗಿದೆ.

Advertisement

ಮಹಾರಾಷ್ಟ್ರದಿಂದ ಬಂದಿದ್ದ ಬಾಲಕ ಹಾಗೂ ಅವನ ಸೋದರ ಅತ್ತೆಯನ್ನು ಪಟ್ಟಣದ ಡಿಗ್ರಿ ಕಾಲೇಜು ಪಕ್ಕದ ಬಿಸಿಎಂ ಹಾಸ್ಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೇ 16 ರಂದು ಮಹಾರಾಷ್ಟ್ರದಿಂದ ಬಂದಿದ್ದ ಬಾಲಕನ ಕೋವಿಡ್ ವರದಿ ನೆಗೆಟಿವ್ ಬಂದಿತ್ತು. ಇಂದಿಗೆ ಕ್ವಾರಂಟೈನ್ ನಲ್ಲಿದ್ದು 20 ದಿನವಾದ್ರೂ ಇವರನ್ನು ಮನೆಗೆ ಕಳುಹಿಸಿರಲಿಲ್ಲ. ಇದೇ ಸೋಮವಾರ ಬಾಲಕನ ಮಾದರಿ ಮರು ಪರೀಕ್ಷೆಗೆ ಕಳುಹಿಸಿತ್ತು.

ಮೂರು ದಿನದ ಹಿಂದೆ ಮೊಳಕಾಲು ನೋವು ಎಂದು ಬಳಲುತ್ತಿದ್ದ ಬಾಲಕನಿಗೆ ವೈದ್ಯರು ಮಾತ್ರೆಗಳನ್ನು ನೀಡಿದ್ದರು. ಆದರೆ, ಬುದವಾರ ರಾತ್ರಿ 11 ಗಂಟೆಯಿಂದ ಹೊಟ್ಟೆ ನೋವು ತಾಳಲಾಗದೆ ಬಾಲಕ ಯಾತನೆ ಅನುಭವಿಸುತ್ತಿದ್ದ. ಆದರೆ, ಬೆಳಗ್ಗೆ 4 ಗಂಟೆಗೆ ಆಂಬುಲೆನ್ಸ್ ನಲ್ಲಿ ರಾಯಚೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆಗೆ ಫಲಿಸದೆ ರಾಯಚೂರಿನ ರಿಮ್ಸ್ ನಲ್ಲಿ ಬಾಲಕ ಮೃತಪಟ್ಟಿದ್ದಾನೆ. ರಾತ್ರಿ 11 ಗಂಟೆಯಿಂದ ಕರೆ ಮಾಡಿದರೂ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಬಾಲಕನ ಸೋದರತ್ತೆ ಆರೋಪಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next