ಮಡಿಕೇರಿ: ನಾಪತ್ತೆಯಾಗಿದ್ದ ಮೊಮ್ಮಗ ಶವವಾಗಿ ದೊರೆತಿದ್ದನ್ನು ಕಂಡು ಆತನ ಅಜ್ಜಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸೋಮವಾರಪೇಟೆ ತಾಲೂಕಿನ ಹೊಸತೋಟದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ತನ್ನ ಸ್ನೇಹಿತರೊಂದಿಗೆ ಆಟವಾಡಲೆಂದು ತೆರಳಿದ್ದ ವಿದ್ಯಾರ್ಥಿ ಮುಬಾಶೀರ್ (18) ಗುರುವಾರ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಬಗ್ಗೆ ಸ್ನೇಹಿತರೊಂದಿಗೆ ಪ್ರಶ್ನಿಸಿದಾಗ ಸುಂಟಿಕೊಪ್ಪ ಸಮೀಪ ಹೊಸತೋಟದ ಹಾರಂಗಿ ಹಿನ್ನೀರಿನಲ್ಲಿ ಸ್ನಾನಕ್ಕೆಂದು ನೀರಿಗಿಳಿದ ಮುಬಾಶೀರ್ ಮತ್ತೆ ಮೇಲೆ ಬಾರದೆ ಇರುವುದನ್ನು ತಿಳಿಸಿದ್ದಾರೆ.
ಇದನ್ನೂ ಓದಿ:ಪುತ್ತೂರು: ಮೊಬೈಲ್ ಫೋನ್ ಸುಟ್ಟು ಹಾಕಿ ರಿಕ್ಷಾ ಚಾಲಕ ಆತ್ಮಹತ್ಯೆ!
ಮೊಮ್ಮಗ ನೀರು ಪಾಲಾದ ಎನ್ನುವ ವಿಷಯ ತಿಳಿಯುತ್ತಿದ್ದಂತೆ ಅಜ್ಜಿ ರುಕಿಯಾ (62 ವ) ಕುಸಿದು ಬಿದ್ದು ಮೃತಪಟ್ಟರು. ರಾತ್ರಿ ವೇಳೆ ಹಾರಂಗಿ ಹಿನ್ನೀರಿನಲ್ಲಿ ಮುಬಾಶೀರ್ ಮೃತದೇಹ ಹುಡುಕಾಡಲು ಸಾಧ್ಯವಾಗದ ಕಾರಣ ಇಂದು ಬೆಳಗ್ಗೆ ಕಾರ್ಯಾಚರಣೆ ನಡೆಸಲಾಯಿತು. ಈ ಸಂದರ್ಭ ಮೃತದೇಹ ದೊರೆತ್ತಿದ್ದು, ಸುಂಟಿಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಶೋಪಿಯಾನ್, ಅವಂತಿಪೊರದಲ್ಲಿ ಎನ್ ಕೌಂಟರ್: ನಾಲ್ವರು ಉಗ್ರರ ಹತ್ಯೆ, ನಾಲ್ವರು ಯೋಧರಿಗೆ ಗಾಯ