Advertisement

ಸೊರಬ : ಕೆರೆಗೆ ಸ್ನಾನಕ್ಕೆ ಹೋದ ಯುವಕ ನೀರು ಪಾಲು

05:56 PM Dec 16, 2021 | Team Udayavani |

ಸೊರಬ: ಕೆರೆಯಲ್ಲಿ ಸ್ನಾನ ಮಾಡಲು ತೆರಳಿದ್ದ ಯುವಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಪಟ್ಟಣದ ಹಿರೇಶಕುನ ಕೆರೆಯಲ್ಲಿ ಗುರುವಾರ ನಡೆದಿದೆ.

Advertisement

ಮೂಲತಃ ಬೆಂಗಳೂರಿನ ರಾಜಗೋಪಾಲ ನಗರದ ಬಸಪ್ಪನಕಟ್ಟೆ ನಿವಾಸಿ ಶಂಕರ ವೆಂಕಟೇಶಪ್ಪ ( 30) ಮೃತ ದುರ್ಧೈವಿ. ಪಟ್ಟಣಕ್ಕೆ ಕೂಲಿ ಕೆಲಸಕ್ಕೆಂದು ಆಗಮಿಸಿದ್ದ ಯುವಕನು ಬುಧವಾರ ಸ್ನಾನ ಮಾಡಲೆಂದು ಕೆರೆಗೆ ತೆರಳಿದ್ದಾಗ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ವಿಷಯ ತಿಳಿದು ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಸತತ ಎರಡು ಗಂಟೆಗಳ ಕಾಲ ಶೋಧಕಾರ್ಯ ನಡೆಸಿ ಮೃತ ದೇಹವನ್ನು ಪತ್ತೆ ಮಾಡಿದ್ದಾರೆ.

ಶೋಧ ಕಾರ್ಯದಲ್ಲಿ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಡಿ.ವಿ. ಮಂಜುನಾಥ್, ವಿ. ನಾಗರಾಜ್, ಮಹೇಶ್ ಮಡಿವಾಳ, ಪ್ರಶಾಂತ್, ಡಿ.ಕೆ. ನಾಗರಾಜ್ ಪಾಲ್ಗೊಂಡಿದ್ದರು. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಶೀನಾ ಬೋರಾ ಜೀವಂತವಾಗಿದ್ದಾಳೆ… ಸಿಬಿಐ ಗೆ ಇಂದ್ರಾಣಿ ಮುಖರ್ಜಿ ಪತ್ರ

Advertisement
Advertisement

Udayavani is now on Telegram. Click here to join our channel and stay updated with the latest news.

Next