Advertisement

ಚೀನಾ ವಸ್ತು ಬಹಿಷ್ಕರಿಸಿ: ಆರಗ

10:58 AM Jun 23, 2020 | Suhan S |

ತೀರ್ಥಹಳ್ಳಿ: ಭಾರತೀಯರಾದ ನಾವು ಸೈನ್ಯಕ್ಕೆ ಬೆನ್ನೆಲುಬಾಗಿ ನಿಲ್ಲಬೇಕು ಮತ್ತು ಚೀನಾದಿಂದ ಆಮದಾಗುವ ಎಲ್ಲಾ ವಸ್ತು ಗಳನ್ನು ಬಹಿಷ್ಕರಿಸಬೇಕೆಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

Advertisement

ದೇಶದ ಹೆಮ್ಮೆಯ ಯೋಧರಿಗೆ ಶ್ರದ್ಧಾಂಜಲಿ ಹಾಗೂ ನುಸುಳುಕೋರ ಚೀನಾದ ಕಳ್ಳ ನೀತಿಯನ್ನು ವಿರೋಧಿಸಿ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು. ಚೀನಾ ಭಾರತೀಯ 20 ಸೈನಿಕರನ್ನು ಅಮಾನುಷವಾಗಿ ಬಲಿತೆಗೆದುಕೊಂಡಿದೆ ಅದರಿಂದ ಚೀನಾದಿಂದ ಆಮದಾಗುವ ವಸ್ತುಗಳನ್ನು ಬಹಿಷ್ಕಾರಿಸಿ ತಕ್ಕ ಪಾಠಕಲಿಸಬೇಕೆಂದರು.

ಪ್ರತಿಭಟನೆಯಲ್ಲಿ ತಾ| ಬಿಜೆಪಿ ಅಧ್ಯಕ್ಷ ಬಾಳೇಬೈಲು ರಾಘವೇಂದ್ರ, ತಾಪಂ ಸದಸ್ಯರಾದ ಸಾಲೇಕೊಪ್ಪ ರಾಮಚಂದ್ರ, ಕುಕ್ಕೆ ಪ್ರಶಾಂತ್‌, ಮಂಜುನಾಥ್‌, ಚಂದವಳ್ಳಿ ಸೋಮಶೇಖರ್‌, ಕವಿರಾಜ್‌, ಬಿಜೆಪಿ ಮುಂಖಡರಾದ ನಾಗರಾಜ್‌ ಶೆಟ್ಟಿ, ಕೋಣದೂಂರು ಮೋಹನ್‌, ಅಶೋಕ್‌ ಮೂರ್ತಿ, ರಮ್ಯ ಅನಿಲ್‌, ಡಾಕಮ್ಮ ಮುಂತಾದವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next