Advertisement

ಬಿಪಿಒ ಉದ್ಯೋಗಿ ಆತ್ಮಹತ್ಯೆ

12:59 AM May 18, 2019 | Lakshmi GovindaRaj |

ಬೆಂಗಳೂರು: ಪ್ರೀತಿಸಿದ ಯುವತಿಯನ್ನು ಕೇವಲ 25 ದಿನಗಳ ಹಿಂದೆ ವಿವಾಹವಾಗಿದ್ದ ಬಿಪಿಒ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಲಸೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Advertisement

ಹಲಸೂರು ನಿವಾಸಿ ಶಂಕರ್‌ (24) ಆತ್ಮಹತ್ಯೆ ಮಾಡಿಕೊಂಡವರು. ಶಂಕರ್‌ ಆತ್ಮಹತ್ಯೆಗೆ ಆತನ ಪತ್ನಿ ಲಕ್ಷಿತಾ (19) ಕಾರಣ ಎಂದು ಆರೋಪಿಸಿ ಮೃತನ ಪೋಷಕರು ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಲಕ್ಷಿತಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಲಸೂರು ಠಾಣೆ ಪೊಲೀಸರು ಹೇಳಿದರು.

ಕೆಲ ವರ್ಷಗಳಿಂದ ಶಂಕರ್‌ ಹಲಸೂರು ನಿವಾಸಿ ಲಕ್ಷಿತಾರನ್ನು ಪ್ರೀತಿಸುತ್ತಿದ್ದರು. ಏ.18 ಇಬ್ಬರೂ ಸಬ್‌ ರಿಜಿಸ್ಟ್ರಾರ್‌ ಕಚೇರಿಯಲ್ಲಿ ವಿವಾಹವಾಗಿದ್ದರು. ವಿವಾಹದ ಬಳಿಕ ಲಕ್ಷಿತಾ ತವರು ಮನೆಗೆ ಹೋಗಿದ್ದು, ಆ ವೇಳೆ ಪೋಷಕರು ಆಕೆಯ ಮನಃಪರಿವರ್ತನೆ ಮಾಡಿದ್ದರಿಂದ ಪತಿಯ ಮನೆಗೆ ವಾಪಸ್‌ ಬಂದಿರಲಿಲ್ಲ.

ಹೀಗಾಗಿ ಶಂಕರ್‌ ಪತ್ನಿಗೆ ಹಲವು ಬಾರಿ ಕರೆ ಮಾಡಿದರೂ ಆಕೆ ಕರೆ ಸ್ವೀಕರಿಸಿಲ್ಲ. ಈ ಹಿನ್ನೆಲೆಯಲ್ಲಿ ಶಂಕರ್‌, ಕರೆ ಸ್ವೀಕರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿಗೆ ಮೊಬೈಲ್‌ನಲ್ಲಿ ಸಂದೇಶ ಕಳುಹಿಸಿದ್ದರು. ಅದಕ್ಕೆ ಲಕ್ಷಿತಾ “ಹೋಗಿ ಸಾಯಿ’ ಎಂದು ಪ್ರತಿಕ್ರಿಯಿಸಿದ್ದಳು ಎನ್ನಲಾಗಿದೆ. ಇದರಿಂದ ನೊಂದ ಶಂಕರ್‌, ಮೇ 12ರಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next