Advertisement
ರಥೋತ್ಸವದ ಸಂದರ್ಭದಲ್ಲಿ ಆಕಾಶದಲ್ಲಿ ಬಂದ ಗರುಡಪಕ್ಷಿ ರಥವನ್ನು ಪ್ರದಕ್ಷಿಣೆ ಮಾಡಿ ಭಕ್ತರಿಗೆ ದರ್ಶನವನ್ನು ನೀಡಿತು. ನಂತರ ಗೋವಿಂದ, ಗೋವಿಂದ ಎಂದು ಸ್ಮರಿಸುತ್ತಾ ಸಹಸ್ರಾರು ಭಕ್ತರು ಬೃಹತ್ ರಥವನ್ನು ಎಳೆದು ಕೃತಾರ್ಥರಾದರು.
ಡಾ.ಎಂ.ಆರ್.ಜಯರಾಮ್ ದಂಪತಿಗಳು ಶ್ರದ್ಧಾಭಕ್ತಿಗಳಿಂದ ನೇರವೇರಿಸಿದರು. ಶ್ರೀಕೃಷ್ಣ ಗಂಧೋತ್ಸವ ಸೇವೆಯ ನಂತರ ಆಸ್ಥಾನ ಸೇವೆಯನ್ನು ನೇರವೇರಿಸಿ, ಅಲಂಕೃತಗೊಂಡಿದ್ದ ರಥಕ್ಕೆ ಶ್ರೀಭೂನೀಳಾ ಸಮೇತ ಶ್ರೀಲಕ್ಷಿ ವೆಂಕಟರಮಣ ಸ್ವಾಮಿಯ ಉತ್ಸವ ಮೂರ್ತಿಗಳನ್ನು ಉತ್ಸವ ಪಲ್ಲಕ್ಕಿಯಲ್ಲಿ ವೇದ ಘೋಷದಲ್ಲಿ ಕರೆತರ ಲಾಯಿತು. ರಥದಲ್ಲಿ ದೇವರನ್ನು ಇಡುತ್ತಿದ್ದಂತೆಯೇ ಗೋವಿಂದ ನಾಮಸ್ಮರಣೆ ಮುಗಿಲು ಮುಟ್ಟಿತು. ಭಕ್ತರು ತೇರು ಬಾಳೆಹಣ್ಣು, ಧವನ ತೇರಿಗೆ ಅರ್ಪಿಸಿದರು. ನೀರು ಮಜ್ಜಿಗೆ ವಿತರಣೆ: ಬಿಸಿಲಿನ ಬೇಗೆಯನ್ನು ತಣಿಸಲು ಸುತ್ತಮುತ್ತಲಿನ ಗ್ರಾಮಸ್ಥರು ಎತ್ತಿನಬಂಡಿಗಳಲ್ಲಿ ಮತ್ತು ಟ್ರ್ಯಾಕ್ಟರ್ಗಳಲ್ಲಿ ಮಜ್ಜಿಗೆ, ಪಾನಕ ಕೊಸಂಬರಿ ಹಂಚುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಉಚಿತ ನೀರಿನ ಪ್ಯಾಕೆಟ್ಗಳನ್ನು ಸಹ ಹಂಚುತ್ತಿದ್ದರು. ನಾದಸ್ವರ, ತಮಟೆ ವಾದ್ಯದೊಂದಿಗೆ ರಥೋತ್ಸವವು ಸಾಗಿತು.
Related Articles
Advertisement