Advertisement

ಶ್ರೀಕೃಷ್ಣ ಮಠದಲ್ಲಿ ಬ್ರಹ್ಮಕಲಶಾಭಿಷೇಕ

11:55 PM Jun 09, 2019 | Team Udayavani |

ಉಡುಪಿ: ಶ್ರೀ ಕೃಷ್ಣಮಠದಲ್ಲಿ ನಡೆಯುವ ಅಪರೂಪದ ಬ್ರಹ್ಮಕಲಶೋತ್ಸವ ಭಾನುವಾರ ಸಂಪನ್ನಗೊಂಡಿತು. ಬೆಳಗ್ಗೆ ಸುಮಾರು 4.30ಕ್ಕೆ ಶ್ರೀಕೃಷ್ಣನಿಗೆ ನೈರ್ಮಾಲ್ಯ ವಿಸರ್ಜನೆ ಪೂಜೆ ನಡೆದ ಬಳಿಕ 6.30ಕ್ಕೆ 108 ಕಲಶಗಳ ಪ್ರತಿಷ್ಠಾಪನೆ ನಡೆಯಿತು.

Advertisement

ಮಧ್ವಾಚಾರ್ಯರ ತಂತ್ರಸಾರ ಸಂಗ್ರಹ ಗ್ರಂಥದಲ್ಲಿ ಉಲ್ಲೇಖವಿರುವಂತೆ ಪಂಚಾಮೃತ, ಪಂಚಗವ್ಯ, ಕಷಾಯೋದಕ, ಶುದೊœàದಕ, ಗಂಧೋದಕ, ಹರಿದ್ರೋದಕ, ಗಂಧ ಪುಷೊದಕ ಇತ್ಯಾದಿಗಳ ವಿವಿಧ ಕಲಶಗಳಿಗೆ ವಿವಿಧ ಸ್ವಾಮೀಜಿಗಳು ಪೂಜೆ ಸಲ್ಲಿಸಿ, ಬಳಿಕ ಒಬ್ಬೊಬ್ಬರಾಗಿ ಶ್ರೀಕೃಷ್ಣನಿಗೆ ಅಭಿಷೇಕ ಮಾಡಿದರು. ಇದು ಬೆಳಗ್ಗೆ 6.30ರಿಂದ 8 ಗಂಟೆಯವರೆಗೆ ನಡೆಯಿತು.

ಪರ್ಯಾಯ ಶ್ರೀ ಪಲಿಮಾರು, ಪೇಜಾವರ, ಅದಮಾರು ಹಿರಿಯ, ಕಿರಿಯ, ಕೃಷ್ಣಾಪುರ, ಕಾಣಿಯೂರು, ಸೋದೆ ಮಠಾಧೀಶರು ಕಲಶಾಭಿಷೇಕ ನಡೆಸಿದರು. ವೈದಿಕರು ಕಲಶಾಭಿಷೇಕ ಸಂಬಂಧಿಸಿ ಹೋಮಗಳನ್ನು ನಡೆಸಿದರು. ಕಲಶಾಭಿಷೇಕದ ಬಳಿಕ ಪರ್ಯಾಯ ಸ್ವಾಮೀಜಿಯವರು ಲಕ್ಷ ತುಳಸಿ ಅರ್ಚನೆ ಸಹಿತ ಮಹಾಪೂಜೆ ನಡೆಸಿದರು.

ಇದೇ ವೇಳೆ ವಿವಿಧ ಭಜನಾ ಮಂಡಳಿಗಳು ಭಜನೆ ಸೇವೆ ನಡೆಸಿಕೊಟ್ಟರು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಸಂಸದೆ ಶೋಭಾ ಕರಂದ್ಲಾಜೆ ಸಹಿತ ವಿವಿಧ ಗಣ್ಯರು ಭೇಟಿ ನೀಡಿ ದೇವರ – ಗೋಪುರ ದರ್ಶನ ಪಡೆದರು.

Advertisement

Udayavani is now on Telegram. Click here to join our channel and stay updated with the latest news.

Next