Advertisement

ಬ್ರಹ್ಮಾವರ: ಬಿಜೆಪಿ ಪರಿವರ್ತನಾ ಸಮಾವೇಶ

11:04 AM Oct 17, 2017 | Team Udayavani |

ಬ್ರಹ್ಮಾವರ: ರಾಜ್ಯದ ಆಡಳಿತ ಪಕ್ಷವಾದ ಕಾಂಗ್ರೆಸ್‌ನಿಂದ ಬೇಸತ್ತು ಪಕ್ಷದ ನಾಯಕರು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ. ಇದುವೇ ನಿಜವಾದ ಪರಿವರ್ತನೆ. ಈ ಪರಿವರ್ತನೆ ಪರ್ವ ಬ್ರಹ್ಮಾವರದಲ್ಲಿ ಮೊದಲು ಪ್ರಾರಂಭಗೊಂಡಿದೆ ಎಂದು ಕೇಂದ್ರ ಸಚಿವ ಅನಂತ್‌ ಕುಮಾರ್‌ ಹೇಳಿದರು.

Advertisement

ಅವರು ಸೋಮವಾರ ಬ್ರಹ್ಮಾವರದಲ್ಲಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಪರಿವರ್ತನಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಆರ್‌. ಅಶೋಕ್‌, ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಂಸದ ಕೆ. ಜಯಪ್ರಕಾಶ್‌ ಹೆಗ್ಡೆ, ಶಾಸಕ ವಿ. ಸುನಿಲ್‌ ಕುಮಾರ್‌, ಮಾಜಿ ಶಾಸಕ ರಾದ ಕೆ. ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಪ್ರಮುಖರಾದ ಕೋಟ ಶ್ರೀನಿವಾಸ ಪೂಜಾರಿ, ಉದಯ ಕುಮಾರ್‌ ಶೆಟ್ಟಿ, ಸುಕುಮಾರ್‌ ಶೆಟ್ಟಿ, ದಿನಕರ ಬಾಬು, ಶೀಲಾ ಕೆ. ಶೆಟ್ಟಿ, ಯಶಪಾಲ್‌ ಸುವರ್ಣ, ನಳಿನಿ ರಾವ್‌, ಕುತ್ಯಾರು ನವೀನ್‌ ಶೆಟ್ಟಿ, ಕುಯಿಲಾಡಿ ಸುರೇಶ ನಾಯಕ್‌, ಶ್ಯಾಮಲಾ ಕುಂದರ್‌ ಮೊದಲಾದವರು ಉಪಸ್ಥಿತರಿದ್ದರು.

ಇದೇ ವೇಳೆ ಜಯ ಪ್ರಕಾಶ್‌ ಹೆಗ್ಡೆ ಅವರ ನೂರಾರು ಅಭಿಮಾನಿಗಳು ಬಿಜೆಪಿಗೆ ಸೇರ್ಪಡೆಗೊಂಡರು. ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಪ್ರತಾಪ್‌ ಹೆಗ್ಡೆ ಮಾರಾಳಿ ಸ್ವಾಗತಿಸಿ, ಮಾಜಿ ಶಾಸಕ ಕೆ. ರಘುಪತಿ ಭಟ್‌ ಪ್ರಸ್ತಾ ವನೆ ಗೈದರು. ರಾಘವೇಂದ್ರ ಕಿಣಿ, ಹರೀಶ್‌ ಶೆಟ್ಟಿ, ಕಮಲಾಕ್ಷ ಹೆಬ್ಟಾರ್‌, ಅಕ್ಷಯ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next