Advertisement

Brahmavara: “ಬೇಕರ್ಸ್‌ ಮೀಟ್‌’ ಉದ್ಘಾಟನೆ

11:39 PM Sep 10, 2023 | Team Udayavani |

ಬ್ರಹ್ಮಾವರ: ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರು ಮತ್ತು ಮಾರಾಟಗಾರರ ಸಂಘ ಹಾಗೂ ಇಂಡಿಯನ್‌ ಬೇಕರಿ ಫೆಡರೇಶನ್‌ ಸಹಭಾಗಿತ್ವದಲ್ಲಿ ಸೆ. 10ರಂದು ಬ್ರಹ್ಮಾವರದ ಮದರ್‌ ಪ್ಯಾಲೇಸ್‌ ಸಭಾಂಗಣದಲ್ಲಿ ಜರಗಿದ “ಬೇಕರ್ಸ್‌ ಮೀಟ್‌’ ಆಹಾರೋ ದ್ಯಮಿಗಳ ಸಂಘಟನಾತ್ಮಕ ಕಾರ್ಯ ಕ್ರಮವನ್ನು ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಅಂಕಿತಾಧಿಕಾರಿ ಡಾ| ಪ್ರೇಮಾನಂದ ಕೆ. ಉದ್ಘಾಟಿಸಿದರು.

Advertisement

ಈ ಸಂದರ್ಭ ಅವರು ಮಾತನಾಡಿ, ಬೇಕರಿ ಉದ್ಯಮವನ್ನು ಮತ್ತಷ್ಟು ಪರಿಪಕ್ವಗೊಳಿಸುವ ನಿಟ್ಟಿನಲ್ಲಿ ಸರಕಾರ ಹೊಸ ಕಾನೂನು, ನಿಯಮಗಳನ್ನು ಜಾರಿಗೆ ತರುತ್ತಿದ್ದು ಅದನ್ನು ಪಾಲನೆ ಮಾಡುವುದು ಅನಿವಾರ್ಯವಾಗಿದೆ. ನಮ್ಮ ಆರೋಗ್ಯದ ಜತೆಗೆ, ಗ್ರಾಹಕರ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಬೇಕರಿ ಉದ್ಯಮವನ್ನು ಲಾಭದಾಯಕವನ್ನಾಗಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ಈ ವೇಳೆ ಮಾಹಿತಿ ಕಾರ್ಯಾಗಾರವೂ ನಡೆಯಿತು. ಸಮಾಜ ಸೇವಕ ವಿಶು ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಅಶಕ್ತರಿಗೆ ಧನಸಹಾಯ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು.

ಇಂಡಿಯನ್‌ ಬೇಕರಿ ಫೆಡರೇಶನ್‌ ಅಧ್ಯಕ್ಷ ಪಿ. ಎನ್‌. ಶಂಕರನ್‌, ಕಾರ್ಯದರ್ಶಿ ಕೆ. ಆರ್‌. ಬಾಲನ್‌, ಸಂಚಾಲಕ ಬಾಲರಾಜ್‌ ಕೆ.ಆರ್‌., ಕೇರಳ ಬೇಕರಿ ಅಸೋಸಿಯೇಶನ್‌ ಅಧ್ಯಕ್ಷ ಕಿರಣ್‌, ಕೇಕ್‌ ತಯಾರಿಕೆಯಲ್ಲಿ ಗಿನ್ನೆಸ್‌ ದಾಖಲೆಗೈದ ರಂಜಿತ್‌, ಚಿಕ್ಕಮಗಳೂರು ಟೇಸ್ಟಿ ವರ್ಲ್ಡ್ ಫ‌ುಡ್‌ ಫ್ಯಾಕ್ಟರಿಯ ಆಡಳಿತ ನಿರ್ದೇಶಕ ಎಂ.ಎನ್‌. ಅರವಿಂದ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಸಂಘದ ಅಧ್ಯಕ್ಷ ವಿಶ್ವನಾಥ್‌ ಕುಲಾಲ್‌, ಉಪಾಧ್ಯಕ್ಷರಾದ ಶ್ರೀಶನ್‌, ಹೆರಾಲ್ಡ್‌, ಪ್ರಧಾನ ಕಾರ್ಯದರ್ಶಿ ಸತ್ಯಪ್ರಸಾದ್‌ ಶೆಣೈ, ಕೋಶಾಧಿಕಾರಿ ಶಶಿಕಾಂತ್‌ ಜಿ. ನಾಯಕ್‌, ಉಡುಪಿ ಜಿಲ್ಲಾ ವರ್ತಕರ ಹಿತರಕ್ಷಣ ವೇದಿಕೆಯ ಅಧ್ಯಕ್ಷ ದಿವಾಕರ್‌ ಸನಿಲ್‌ ಉಪಸ್ಥಿತರಿದ್ದರು.

Advertisement

ಸಂಘದ ಗೌರವಾಧ್ಯಕ್ಷ ವಾಲ್ಟರ್‌ ಸಲ್ಡಾನ ಸ್ವಾಗತಿಸಿದರು. ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸಗಳ ತಯಾರಕರ ಮತ್ತು ಮಾರಾಟಗಾರರ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ್‌ ಪಿ.ಎಸ್‌. ಪ್ರಸ್ತಾವನೆಗೈದರು. ನವೀನ್‌ ಶೆಟ್ಟಿ ವಂದಿಸಿ, ಚಂದ್ರಕಾಂತ್‌ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next