Advertisement

ಬ್ರಹ್ಮಾವರ : ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರ ಶವಗಳು ಪತ್ತೆ

12:24 PM Oct 20, 2021 | Team Udayavani |

ಬ್ರಹ್ಮಾವರ : ತಾಲೂಕಿನ ಉಗ್ಗೇಲ್ ಬೆಟ್ಟು ಎಂಬಲ್ಲಿ ಮಡಿಸಾಲು ಹೊಳೆಯಲ್ಲಿ ಈಜಲು ತೆರಳಿದ್ದ ಗೆಳೆಯರಿಬ್ಬರು ಮಂಗಳವಾರ ನೀರುಪಾಲಾಗಿದ್ದು, ಶವಗಳು ಬುಧವಾರ ಪತ್ತೆಯಾಗಿದೆ.

Advertisement

ಮೃತ ದುರ್ದೈವಿಗಳು ಶ್ರೇಯಸ್ (18) ಮತ್ತು ಅನಾಸ್ (16)ಎಂದು ತಿಳಿದು ಬಂದಿದೆ.

ಈಜಲು ತೆರಳಿದ್ದ ಮೂವರ ಪೈಕಿ ಇಬ್ಬರು ನೀರುಪಾಲಾಗಿದ್ದು, ಪಾರಾಗಿದ್ದ ಓರ್ವ ವಿಚಾರವನ್ನು ಯಾರಿಗೂ ಹೇಳದೆ ಗುಟ್ಟು ಮಾಡಿದ್ದ.

ನಾಪತ್ತೆಯಾದ ಇಬ್ಬರ ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮಂಗಳವಾರ ಸಂಜೆಯೇ ಬಾಲಕರು ನೀರುಪಾಲಾಗಿರುವ ವಿಚಾರವನ್ನು ಪೊಲೀಸರು ಖಚಿತಪಡಿಸಿಕೊಂಡು ನದಿಯಲ್ಲಿ ಹುಡುಕಾಟಕ್ಕಿಳಿದಿದ್ದರು. ಈಜು ಪಟು ಈಶ್ವರ್ ಅವರನ್ನು ಕಾರ್ಯಾಚರಣೆಯಲ್ಲಿ ಬಳಸಿಕೊಳ್ಳಲಾಗಿತ್ತು.

Advertisement

ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next