Advertisement

Brahmavara: ಎಂಟನೇ ತರಗತಿ ವಿದ್ಯಾರ್ಥಿ ಮದರಸ ಹಾಸ್ಟೆಲ್‌ ನಲ್ಲಿ ನೇಣು ಬಿಗಿದು ಆತ್ಮಹ*ತ್ಯೆ

02:59 PM Oct 13, 2024 | Team Udayavani |

ಬ್ರಹ್ಮಾವರ: ಹೇರಾಡಿ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬ ಮದರಸ ಹಾಸ್ಟೆಲ್‌ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಮೃತ ವಿದ್ಯಾರ್ಥಿಯು ರಿಹಾನ ಬೇಗಂ ಎಂಬವರ ಪುತ್ರ ಮೊಹಮ್ಮದ್‌ ಜಹೀದ (12) ಎಂದು ಗುರುತಿಸಲಾಗಿದೆ.

ಈತನು ಕಳೆದ 4 ತಿಂಗಳಿಂದ ಬ್ರಹಾವರ ತಾಲೂಕಿನ ರಂಗನಕೆರೆಯ ಮಾಲೀಕ್ ದಿನಾರ್ ಮದರಸ ಹಾಸ್ಟೆಲ್‌ನಲ್ಲಿ ಉಳಿದುಕೊಂಡು ಹೇರಾಡಿ ಖಾಸಗಿ ಶಾಲೆಯಲ್ಲಿ 08 ನೇ ತರಗತಿ ವಿಧ್ಯಾಭ್ಯಾಸ ಮಾಡುತ್ತಿದ್ದು ರಜೆಯನ್ನು ಮುಗಿಸಿ ಅ. 11ರಂದು ಹಾಸ್ಟೆಲ್‌ ಗೆ ಮರಳಿದ್ದಾನೆ.

ಆತ ರಾತ್ರಿ 9 ಗಂಟೆಗೆ ಊಟಕ್ಕೆ ಬಾರದಿದ್ದುದನ್ನು ಗಮನಿಸಿ ಹುಡುಕಿದಾಗ ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ಸರಳಿಗೆ ಬೈರಸ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿದ್ದುದು ಕಂಡುಬಂದಿದೆ. ಕೂಡಲೇ ಆತನನ್ನು ಚಿಕಿತ್ಸೆಗಾಗಿ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ವೈದ್ಯರು ರಾತ್ರಿ 10:40ರ ಸುಮಾರಿಗೆ ಆತನನ್ನು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮೃತನ ಮರಣದಲ್ಲಿ ಸಂಶಯವಿರುವುದಾಗಿ ಬಾಲಕನ ತಾಯಿ ರಿಹಾನ ಬೇಗಂ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕನಿಗೆ ಹಾಸ್ಟೆಲ್ ಗೆ ಹೋಗಲು ಮನಸ್ಸಿಲ್ಲವೆಂದು, ಹಾಸ್ಟೆಲ್ನ ಇತರ ವಿದ್ಯಾರ್ಥಿಗಳೊಂದಿಗೆ ಸಣ್ಣ ಮಟ್ಟಿನ ಜಗಳ ಆಗಿತ್ತು ಎಂದು ತಿಳಿದು ಬಂದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next