Advertisement
ಕೋಲ್ಕತ್ತಾಗೆ ಹೋಗಿದ್ದ ಅವರು ಅಸ್ಸಾಂನ ಗುವಾಹಟಿಯಲ್ಲಿರುವ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿದ್ದರು. ಬಳಿಕ ದೆಹಲಿಗೆ ತೆರಳಿ ಕರ್ನಾಟಕ ಭವನದಲ್ಲಿ ಬಿಜೆಪಿ ಸಂಸದರಾದ ವಿ.ಶ್ರೀನಿವಾಸಪ್ರಸಾದ್, ಜಿ.ಎಸ್.ಬಸವರಾಜು, ಬಿ.ವೈ.ರಾಘವೇಂದ್ರ ಜತೆ ಉಪಾಹಾರ ಸೇವಿಸುತ್ತಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, “ಹಳ್ಳಿಹಕ್ಕಿ ದೆಹಲಿ ಭೇಟಿ ಯಾಕೆ’ ಎಂಬ ಚರ್ಚೆಗಳು ನಡೆಯುತ್ತಿವೆ.
Related Articles
Advertisement
ಸಿದ್ದರಾಮಯ್ಯಗೆ ಆಸಕ್ತಿಯಿಲ್ಲ ಎಂದ “ಹಳ್ಳಿಹಕ್ಕಿ’: ಇದೇ ವೇಳೆ ಸುದ್ದಿಗಾರರ ಜತೆ ಮಾತನಾಡಿದ ವಿಶ್ವನಾಥ್, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಸಮ್ಮಿಶ್ರ ಸರ್ಕಾರ ಮುಂದುವರಿಸುವ ಆಸಕ್ತಿಯಿಲ್ಲ ಎಂದರು. ಸಿದ್ದರಾಮಯ್ಯ ಅವರು ಹೊಣೆಗಾರಿಕೆಯನ್ನು ಸರಿಯಾಗಿ ನಿಭಾಯಿಸಿಲ್ಲ. ಸಿದ್ದರಾಮಯ್ಯ ಅವರಿಗೆ ಸಮ್ಮಿಶ್ರ ಸರ್ಕಾರ ಸುಸೂತ್ರವಾಗಿ ಮುಂದುವರಿಯುವುದಕ್ಕಿಂತ ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿ ಕುಳಿತುಕೊಳ್ಳುವ ಆಸಕ್ತಿಯಿದೆ ಎಂದು ಆರೋಪಿಸಿದರು.
ರಾಜ್ಯ ರಾಜಕಾರಣ ಅಧೋಗತಿಯತ್ತ ಹೋಗುತ್ತಿದೆ. ಕಾಂಗ್ರೆಸ್-ಜೆಡಿಎಸ್ ನಾಯಕರು ಜವಾಬ್ದಾರಿಯಿಂದ ನಡೆದುಕೊಳ್ಳುತ್ತಿಲ್ಲ. ಸಮನ್ವಯತೆ ಬೆತ್ತಲಾಗಿದೆ. ಸಮ್ಮಿಶ್ರ ಸರ್ಕಾರದ ಪ್ರಯೋಗ ವಿಫಲವಾಗಿದೆ ಎಂದು ಬೇಸರ ಹೊರ ಹಾಕಿದರು. ಈ ಮಧ್ಯೆ, ವಿಶ್ವನಾಥ್ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ದೇವೇಗೌಡ, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಆದರೆ, ವಿಶ್ವನಾಥ್ ಯಾವುದೇ ಕಾರಣಕ್ಕೂ ನಮ್ಮ ಪಕ್ಷ ಬಿಟ್ಟು ಹೋಗಲ್ಲ ಎಂದರು.