Advertisement

ಲೋಕಾಯುಕ್ತ ಕಚೇರಿಯಲ್ಲೇ ಲಂಚ ಎಸಿಬಿ ಬಲೆಗೆ ಬಿದ್ದ ಸಂಕಣ್ಣ 

07:02 PM Apr 06, 2017 | Harsha Rao |

ಬೆಂಗಳೂರು:ಯಾವಾಗಲು ಬೇರೆ ಬೇರೆ ಸರಕಾರಿ ಕಚೇರಿಗಳಲ್ಲಿ ಲಂಚ ಪಡೆದು ಕೆಲಸ ಮಾಡುವ ಅಧಿಕಾರಿಗಳನ್ನು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವ ಸಂಗತಿ ನಾವೆಲ್ಲರು ಕೇಳಿರುತ್ತೇವೆ ಆದರೆ ಇಲ್ಲೊಂದು ವಿಚಿತ್ರ ಪ್ರಸಂಗ ನಡೆದಿದೆ ಅದೇನೆಂದರೆ ಲೋಕಾಯುಕ್ತ ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದ ಅಲ್ಲಿನ ಅಧಿಕಾರಿಯೊಬ್ಬರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ಲೋಕಾಯುಕ್ತ ಕಚೇರಿಯಲ್ಲಿ ನಡೆದಿದೆ. 

Advertisement

ಲೋಕಾಯುಕ್ತ ಕಚೇರಿಯಲ್ಲಿ ಜಡ್ಜ್ಮೆಂಟ್ ರೈಟರ್ ಆಗಿ ಕೆಲಸ ಮಾಡುತಿದ್ದ ಸಂಕಣ್ಣ ಎಸಿಬಿ ಬಲೆಗೆ ಬಿದ್ದ ಆಸಾಮಿ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಪೇದೆ ಕೇಶಪ್ಪ ಅವರನ್ನು ಆರೋಪದಿಂದ ಮುಕ್ತಗೊಳಿಸಲು ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಪ್ರಮಾಣ ಪತ್ರಕ್ಕೆ ಪೇದೆ ಕೇಶಪ್ಪ ಅವರ ಬಳಿ ಸಂಕಣ್ಣ 34 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದು ಬಂದಿದ್ದು ಅದರಲ್ಲಿ 25 ಸಾವಿರ ಪಡೆಯುವ ವೇಳೆ ಎಸಿಬಿ ಎಸ್ಪಿ ಗಿರೀಶ್ ಅವರ ನೇತೃತ್ವದಲ್ಲಿ ನಡೆಸಿದ ದಾಳಿಯಲ್ಲಿ ಜಡ್ಜ್ಮೆಂಟ್ ರೈಟರ್ ಸಂಕಣ್ಣ ಸಿಕ್ಕಿಬಿದ್ದಿದ್ದಾನೆ.

Advertisement

Udayavani is now on Telegram. Click here to join our channel and stay updated with the latest news.

Next