Advertisement

ಕುತ್ಲೂರು ಕಾಡಬಾಗಿಲು ಸೇತುವೆ ಕುಸಿತ: ಸಂಕಷ್ಟದಲ್ಲಿ ಅರಣ್ಯವಾಸಿಗಳು

12:33 PM Jul 26, 2023 | Team Udayavani |

ಬೆಳ್ತಂಗಡಿ: ಕುಕ್ಕುಜೆಯಿಂದ ಅಳಂಬ, ಬರೆಂಗಾಡಿ, ಒಂಜರ್ದಡಿ, ಏರ್ದಡಿ, ಪಂಜಾಲು ಮೊದಲಾದ ಕಡೆಗೆ ಸಂಪರ್ಕಿಸುವ ಕಾಡಬಾಗಿಲು ಎಂಬಲ್ಲಿಯ ಸೇತುವೆ ಜುಲೈ 26 ರಂದು ಕುಸಿದಿದೆ.

Advertisement

ಸುಮಾರು 30 ಅರಣ್ಯವಾಸಿ ಮಲೆಕುಡಿಯ ಮತ್ತು ಇತರ ಅರಣ್ಯವಾಸಿ ಕುಟುಂಬಗಳಿಗೆ ಸಂಪರ್ಕಿಸುವ ಸೇತುವೆ ಇದಾಗಿತ್ತು. ಸುಮಾರು 50 ವರ್ಷದ ಹಿಂದೆ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಇದೀಗ ಸೇತುವೆಯ ಮಧ್ಯದ ಪಿಲ್ಲರ್ ಕುಸಿದಿದೆ. ಅರಣ್ಯವಾಸಿಗಳು ಈ ಸೇತುವೆ ಮೂಲಕವೇ ಸಂಚಾರ ಮಾಡುತ್ತಿದ್ದರು. ಇದೀಗ ಸೇತುವೆ ಕುಸಿದಿರುವುದರಿಂದ ತೊಂದರೆಯಾಗಿದೆ. ಇನ್ನು ಕಿಲೋಮೀಟರ್ ಗಟ್ಟಲೆ ಕಾಲ್ನಡಿಗೆಯಲ್ಲೇ ಸಾಗಬೇಕಾದ ಅನಿವಾರ್ಯ ನಿರ್ಮಾಣವಾಗಿದೆ.

ಕಾಡಬಾಗಿಲು ಸೇತುವೆಯನ್ನು ತಕ್ಷಣವೇ ನಿರ್ಮಾಣ ಮಾಡಬೇಕು. ಅರಣ್ಯವಾಸಿಗಳಿಗೆ ಸಂಚರಿಸಲು ತೊಂದರೆಯಾಗದಂತೆ ಕ್ರಮ ವಹಿಸಲು ಆಡಳಿತ ವ್ಯವಸ್ಥೆ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.

ಇದನ್ನೂ ಓದಿ: ಉಡುಪಿ: ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ; ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್‌ ಐಆರ್

Advertisement

Udayavani is now on Telegram. Click here to join our channel and stay updated with the latest news.

Next