Advertisement

ಇಚ್ಲಂಪಾಡಿಯ ಕರ್ತಡ್ಕಕ್ಕೆ ಕೂಡಿಬಂತು ಸೇತುವೆ ಭಾಗ್ಯ

09:13 AM Apr 27, 2022 | Team Udayavani |

ಸುಬ್ರಹ್ಮಣ್ಯ: ಹಲವು ವರ್ಷ ಗಳಿಂದ ಅಡಿಕೆ ಮರದ ಪಾಲದಲ್ಲಿ ಸಂಚರಿಸುವ ಇಚ್ಲಂಪಾಡಿಯ ಕರ್ತಡ್ಕ ಎಂಬಲ್ಲಿಯ ತೋಡಿಗೆ ಸೇತುವೆ ನಿರ್ಮಾಣ ಭರದಿಂದ ಸಾಗುತ್ತಿದ್ದು, ಹಲವು ವರ್ಷಗಳ ಬಳಿಕ ಇಲ್ಲಿನ ನಿವಾಸಿಗಳ ಮರದ ಪಾಲದ ಮೇಲಿನ ನಡಿಗೆಗೆ ಮುಕ್ತಿ ಸಿಗಲಿದೆ.

Advertisement

ಕಡಬ ತಾಲೂಕಿನ ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯ ಇಚ್ಲಂಪಾಡಿ ಗ್ರಾಮದ 2ನೇ ವಾರ್ಡಿನ ಕರ್ತಡ್ಕ ಎಂಬಲ್ಲಿ ತೋಡಿಗೆ ಸೇತುವೆ ಇಲ್ಲದೆ ಸ್ಥಳೀಯರೇ ಅಡಿಕೆ ಮರದ ಪಾಲ ನಿರ್ಮಿಸಿ ಅದರ ಮೇಲೆ ಸಂಚರಿಸುತ್ತಿದ್ದರು. ಮಕ್ಕಳು, ವೃದ್ಧರು, ಅನಾರೋಗ್ಯ ಪೀಡಿತರು ಮಳೆಗಾಲದಲ್ಲಿ ಅಪಾಯಕಾರಿ ಪಾಲದಲ್ಲಿ ಸಂಚರಿಸಬೇಕಿತ್ತು. ಬೇಸಗೆಯಲ್ಲಿ ತೋಡಿಗೆ ಪೈಪ್‌ ಅಳವಡಿಸಿ ರಸ್ತೆ ನಿರ್ಮಿಸುತ್ತಿದ್ದರು.

ಸೇತುವೆ ಮಂಜೂರು

ಇಲ್ಲಿಗೆ ಸರ್ವಋತು ಸೇತುವೆ ನಿರ್ಮಿಸುವಂತೆ ಹಲವಾರು ವರ್ಷಗಳ ಬೇಡಿಕೆ ಇತ್ತು. ಫ‌ಲಾನುಭವಿಗಳ ಮನವಿಗೆ ಇದೀಗ ಸ್ಪಂದನೆ ದೊರೆತಿದೆ. ಲೋಕೋಪಯೋಗಿ ಇಲಾಖೆಯ ಗ್ರಾಮ ಬಂಧ ಸೇತು ಯೋಜನೆಯಡಿ ಇಲ್ಲಿ ಸೇತುವೆ ನಿರ್ಮಾಣವಾಗಲಿದ್ದು, ಸುಮಾರು 18 ಲಕ್ಷ ರೂ. ಅನುದಾನದಲ್ಲಿ ಕಾಮಗಾರಿ ನಡೆಯಲಿದೆ.

Advertisement

ಕಾಮಗಾರಿ ಆರಂಭ

ಸೇತುವೆ ನಿರ್ಮಿಸುವ ಕಾಮಗಾರಿ ಈಗ ಆರಂಭಗೊಂಡಿದೆ. ಮೊದಲ ಹಂತದ ಪಿಲ್ಲರ್‌ ನಿರ್ಮಾಣ ಕಾಮಗಾರಿ ನಡೆಯು ತ್ತಿದೆ. ನವನೀತ್‌ ಎಂಬವರು ಕಾಮಗಾರಿ ನಿರ್ವಹಿಸುತ್ತಿದ್ದಾರೆ. ಮಳೆಗಾಲಕ್ಕೆ ಮೊದಲು ಕಾಮಗಾರಿ ಮುಗಿಸುವ ಸೂಚನೆ ನೀಡಲಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಉದಯವಾಣಿ ಸುದಿನದಲ್ಲೂ ವರದಿಯಾಗಿತ್ತು. ಇದೀಗ ಕಾಮಗಾರಿ ಆರಂಭಿಸುವ ಮೂಲಕ ಈ ಭಾಗದ ಜನತೆಯ ಸಮಸ್ಯೆಗೆ ಮುಕ್ತಿ ಸಿಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next