Advertisement

WrestlersCase ಅವಕಾಶ ಸಿಕ್ಕಾಗೆಲ್ಲಾ ಬ್ರಿಜ್ ಭೂಷಣ್ ಕಿರುಕುಳ:ಕೋರ್ಟ್ ನಲ್ಲಿ ದೆಹಲಿಪೊಲೀಸರು

01:40 PM Sep 24, 2023 | Team Udayavani |

ಹೊಸದಿಲ್ಲಿ: ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ತಮಗೆ ಸಿಕ್ಕ ಅವಕಾಶಗಳು ಸಿಕ್ಕಿದಾಗೆಲ್ಲಾ ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿದ್ದಾರೆ ಎಂದು ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯಕ್ಕೆ ತಿಳಿಸಿದರು.

Advertisement

ಆರು ಮಹಿಳಾ ಕುಸ್ತಿಪಟುಗಳು ಸಲ್ಲಿಸಿದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ ನಂತರ ಬ್ರಿಜ್ ಭೂಷಣ್ ವಿರುದ್ಧ ಆರೋಪಗಳ ಬಗ್ಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ವಾದಗಳನ್ನು ಆಲಿಸುತ್ತಿದೆ.

ದೆಹಲಿ ಪೊಲೀಸರನ್ನು ಪ್ರತಿನಿಧಿಸಿದ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು,” ಬ್ರಿಜ್ ಭೂಷಣ್ ಅವರು ಏನು ಮಾಡುತ್ತಿದ್ದಾರೆಂದು ತಿಳಿದಿದ್ದರು ಮತ್ತು ಕುಸ್ತಿಪಟುಗಳಿಗೆ ಕಿರುಕುಳ ಕೊಡುವುದೇ ಅವರ ಉದ್ದೇಶವಾಗಿತ್ತು” ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನೂ ಓದಿ:Love Story: ಪತ್ನಿಯನ್ನೇ ಪ್ರಿಯಕರನ ಜೊತೆ ಮದುವೆ ಮಾಡಿಸಿಕೊಟ್ಟ ಪತಿ ಮಹಾಶಯ.!

ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪ ಹೊರಿಸಲು ಮೂರು ರೀತಿಯ ಸಾಕ್ಷ್ಯಾಧಾರಗಳಿವೆ ಎಂದು ಅವರು ತಿಳಿಸಿದರು. ಇವುಗಳಲ್ಲಿ ಲಿಖಿತ ದೂರು ಮತ್ತು ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಅಡಿಯಲ್ಲಿ ಸೆಕ್ಷನ್ 161 (ಪೊಲೀಸರಿಂದ ಸಾಕ್ಷಿಗಳ ವಿಚಾರಣೆ) ಮತ್ತು 164 (ಮ್ಯಾಜಿಸ್ಟ್ರೇಟ್ ದಾಖಲಿಸಿದ ಹೇಳಿಕೆಗಳು) ಅಡಿಯಲ್ಲಿ ಎರಡು ದಾಖಲಾದ ಹೇಳಿಕೆಗಳು ಸೇರಿವೆ.

Advertisement

ಭಾರತದ ಹೊರಗೆ ನಡೆದ ಪ್ರಕರಣಗಳಿಗೆ ಸಿಆರ್‌ಪಿಸಿಯ ಸೆಕ್ಷನ್ 188 ರ ಅಡಿಯಲ್ಲಿ ಅನುಮತಿ ಅಗತ್ಯವಿದೆ ಎಂದು ಡಬ್ಲ್ಯುಎಫ್‌ಐ ಮುಖ್ಯಸ್ಥರ ವಕೀಲರು ಮಾಡಿದ ವಾದವನ್ನು ಪ್ರತಿವಾದಿಸಿದ ಅವರು, ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಆರೋಪ ಹೊರಿಸಲು ನ್ಯಾಯಾಲಯವು ತನ್ನ ಅಧಿಕಾರ ವ್ಯಾಪ್ತಿಯಲ್ಲಿದೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next