Advertisement

Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ

08:02 PM Jun 24, 2024 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಸಂಸತ್ತಿನಲ್ಲಿ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

Advertisement

ಸೋಮವಾರ ಲೋಕಸಭೆಯಲ್ಲಿ ಅವರು ಕನ್ನಡದಲ್ಲಿ ಮಾಡಿದ ಪ್ರಮಾಣವಚನದಲ್ಲಿ ತುಳುನಾಡಿನ ದೈವ ದೇವರನ್ನು ಸ್ಮರಿಸಿದ್ದು ವಿಶೇಷವಾಗಿತ್ತು.“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆಂದೂ, ದೈವ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ” ಎಂದು ಹೇಳಿ ನಂತರ “ಮಾತೆರೆಗ್ಲಾ ಸೊಲ್ಮೆಲು” ಎಂದು ಸಂಸತ್ತನ್ನು ಅಭಿನಂದಿಸಿದರು.

ರಾಜ್ಯದ ಹಲವು ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next