Advertisement

‘ಕೌಸಲ್ಯ ಸುಪ್ರಜಾ ರಾಮ’ನಿಗೆ ನಾಯಕಿಯಾದ ಬೃಂದಾ ಆಚಾರ್ಯ

03:45 PM Mar 26, 2023 | Team Udayavani |

ನಟ ಡಾರ್ಲಿಂಗ್‌ ಕೃಷ್ಣ ನಾಯಕನಾಗಿ ಅಭಿನಯಿಸುತ್ತಿರುವ ಶಶಾಂಕ್‌ ನಿರ್ದೇಶನದ ಹೊಸ ಚಿತ್ರ “ಕೌಸಲ್ಯ ಸುಪ್ರಜಾ ರಾಮ’ದ ಕೆಲಸಗಳು ಭರದಿಂದ ನಡೆಯುತ್ತಿದೆ. ಈಗಾಗಲೇ “ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದ ಒಂದಷ್ಟು ಚಿತ್ರೀಕರಣ ಕೂಡ ಸದ್ದಿಲ್ಲದೆ ನಡೆದಿದ್ದು, ಇದೇ ವೇಳೆ ಚಿತ್ರತಂಡ ಸಿನಿಮಾದ ನಾಯಕಿಯ ಹೆಸರನ್ನು ಅಧಿಕೃತವಾಗಿ ಘೋಷಿಸಿದೆ.

Advertisement

“ಕೌಸಲ್ಯ ಸುಪ್ರಜಾ ರಾಮ’ ಸಿನಿಮಾಕ್ಕೆ ಬೃಂದಾ ಆಚಾರ್ಯ ನಾಯಕಿಯಾಗಿ ಆಯ್ಕೆಯಾಗಿದ್ದು, ಯುಗಾದಿ ಹಬ್ಬದ ಸಂದರ್ಭದಲ್ಲಿ ನಿರ್ದೇಶಕ ಶಶಾಂಕ್‌ ನಾಯಕಿ ಬೃಂದಾ ಆಚಾರ್ಯ ಅವರ ಫ‌ಸ್ಟ್‌ ಲುಕ್‌ ಪೋಸ್ಟರ್‌ ಅನ್ನು ಸೋಶಿಯಲ್‌ ಮೀಡಿಯಾಗಳ ಮೂಲಕ ಹಂಚಿಕೊಂಡಿದ್ದಾರೆ.

ಇನ್ನು “ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ಬೃಂದಾ ಆಚಾರ್ಯ ಶಿವಾನಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, “ಅರವಿಂದ ಲೋಚನೆ ಭವತು ಪ್ರಸನ್ನಮುಖ ಚಂದ್ರಮಂಡಲೇ…’ ಎಂದು ಬೃಂದಾ ಪಾತ್ರದ ಬಗ್ಗೆ ಸಣ್ಣ ಮಾಹಿತಿ ಬಿಟ್ಟುಕೊಟ್ಟಿದ್ದಾರೆ.

ಇದನ್ನೂ ಓದಿ:ಮಂಗಳೂರು: ಹೋಳಿ ಡಿಜೆ ಪಾರ್ಟಿಗೆ ಬಜರಂಗ ದಳ ಕಾರ್ಯಕರ್ತರಿಂದ ದಾಳಿ

“ಪ್ರೇಮಂ ಪೂಜ್ಯಂ’ ಸಿನಿಮಾದ ಮೂಲಕ ಕನ್ನಡದ ಸಿನಿಮಾ ರಸಿಕರಿಗೆ ಪರಿಚಯವಾಗಿದ್ದ ಬೃಂದಾ ಆಚಾರ್ಯ, ಈ ವರ್ಷದ ಆರಂಭದಲ್ಲಿಯೇ “ಜೂಲಿಯೆಟ್‌-2′ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಸದ್ಯ ಬೃಂದಾ ನಾಯಕಿಯಾಗಿ ಅಭಿನಯಿಸುತ್ತಿರುವ ಕೆಲ ಸಿನಿಮಾಗಳು ಇನ್ನೂ ಪ್ರೊಡಕ್ಷನ್‌ ಹಂತದಲ್ಲಿದ್ದು, ಇದರ ನಡುವೆಯೇ ಇದೀಗ ಡಾರ್ಲಿಂಗ್‌ ಕೃಷ್ಣ ಜೊತೆ ಬೃಂದಾ ತೆರೆ ಹಂಚಿಕೊಳ್ಳಲು ರೆಡಿಯಾಗಿದ್ದಾರೆ.

Advertisement

ಈಗಾಗಲೇ “ಕೌಸಲ್ಯ ಸುಪ್ರಜಾ ರಾಮ’ ಚಿತ್ರತಂಡ ಸೇರಿಕೊಂಡಿರುವ ಬೃಂದಾ ಆಚಾರ್ಯ, ಸಿನಿಮಾದ ಒಂದಷ್ಟು ಶೂಟಿಂಗ್‌ನಲ್ಲೂ ಭಾಗಿಯಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next