Advertisement

ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ

11:39 PM Aug 21, 2019 | Team Udayavani |

ಬೆಂಗಳೂರು: ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತರಬೇಕು. ಅಲ್ಲದೆ, ರಾಜ್ಯದಲ್ಲಿ ಅನಧಿಕೃತ ವಾಗಿ ನಡೆಯುತ್ತಿರುವ ಕಸಾಯಿಖಾನೆಗ ಳನ್ನು ಗುರುತಿಸಿ ತೆರವುಗೊಳಿಸಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಅವರು ಮನವಿ ಸಲ್ಲಿಸಿದರು.

Advertisement

ರಾಜ್ಯಾ ದ್ಯಂತ ಗಣೇಶೋತ್ಸವ ಆಚರಿಸಲು ಕೆಲವು ಕಾನೂನಿನ ಅಡಚಣೆ ಇದ್ದು, ಅದನ್ನು ನಿವಾರಿಸಬೇಕು. ಗಣೇಶ ಪ್ರತಿಷ್ಠಾ ಪನೆಗೆ ನಿಯಂತ್ರಣ ಹೇರಿ ತಡೆಯೊ ಡ್ಡುವ ಕೆಲಸ ಆಗುತ್ತಿದೆ. ಗಣೇಶೋತ್ಸವಕ್ಕೆ ಅನುಮತಿ ಪಡೆಯುವ ಕ್ರಮವನ್ನು ರದ್ದುಪಡಿಸ ಬೇಕು ಎಂದು ಕೆಲವರು ನನ್ನ ಬಳಿ ಬಂದು ಮನವಿ ಮಾಡಿದ್ದಾರೆ. ಈ ಕುರಿತು ಪ್ರತಿ ಭಟನೆಗೂ ಮುಂದಾಗಿದ್ದಾರೆ. ಹೀಗಾಗಿ, ಸರ್ಕಾರ ಅದಕ್ಕೆ ಅವಕಾಶ ಕೊಡಬಾರದು ಎಂದು ಮನವಿ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next