Advertisement

ಮನೆಯ ಹಿರಿಜೀವಗಳನ್ನು ಕಿತ್ತುಕೊಂಡ ಕ್ರೂರಿ : ಕೋವಿಡ್ ಗೆ ಸಹೋದರರು ಬಲಿ

04:34 PM Jun 02, 2021 | Team Udayavani |

ಧಾರವಾಡ: ಕೋವಿಡ್ ಗೆ ಸಹೋದರಿಬ್ಬರು ಬಲಿಯಾದ ಘಟನೆ ತಾಲೂಕಿನ ಮುಗದ ಗ್ರಾಮದಲ್ಲಿ ನಡೆದಿದೆ.

Advertisement

ದೈತ್ಯ ಕಾಯ ಮತ್ತು ಶ್ರಮಿಕ ವರ್ಗದ ಸಹೋದರರು ಗ್ರಾಮದಲ್ಲಿ ಎಲ್ಲರಿಗೂ ಬೇಕಾದವರು.ಮೊದಲು ಗ್ರಾಮದ ಸುಬ್ಬಪ್ಪ ಭೋವಿ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ನೀಡಿದ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ‌.

ಇದನ್ನೂ ಓದಿ: ಲಾಕ್ ಡೌನ್ ವಿಸ್ತರಣೆ ಮಾಡುತ್ತೇವೆ, ಕೆಲವೊಂದು ನಿರ್ಬಂಧಗಳ ಸಡಿಲಿಕೆ ಮಾಡುತ್ತೇವೆ: ಬಿ ಎಸ್ ವೈ

ಇದಾದ ಬಳಿಕ ಅವರ ಸಹೋದರ ಭರಮಪ್ಪ ಅವರಿಗೂ ಸೋಂಕು ಪತ್ತೆಯಾಗಿದ್ದು, ಅವರೂ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಈ ಹಿರಿಯ ಜೀವಗಳನ್ನು ಕಳೆದುಕೊಂಡ ಕುಟುಂಬಗಳಲ್ಲಿ ನೋವು‌ ಮಡುಗಟ್ಟಿದೆ.

ಘಟನೆಯಿಂದಾಗಿ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next