Advertisement

Delhi Excise Policy Case: ಬಿಆರ್ ಎಸ್ ನಾಯಕಿ ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನ

05:32 PM Mar 26, 2024 | Team Udayavani |

ಹೊಸದಿಲ್ಲಿ: ದೆಹಲಿಯ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಭಾರತ್ ರಾಷ್ಟ್ರ ಸಮಿತಿ( ಬಿಆರ್‌ಎಸ್‌ ) ನಾಯಕಿ ಕೆ.ಕವಿತಾ ಅವರನ್ನು ದೆಹಲಿ ನ್ಯಾಯಾಲಯ ಮಂಗಳವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement

ಕಸ್ಟಡಿ ವಿಚಾರಣೆ ವಿಸ್ತರಿಸಲು ಜಾರಿ ನಿರ್ದೇಶನಾಲಯ ಕೋರದ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಈ ಆದೇಶ ಹೊರಡಿಸಿದ್ದಾರೆ.

ಮಾ. 16 ರಂದು 7 ದಿನಗಳ ಇಡಿ ಕಸ್ಟಡಿಗೆ ಕವಿತಾ ಅವರನ್ನು ಒಪ್ಪಿಸಲಾಗಿತ್ತು. ಕಳೆದ ಶನಿವಾರ ಅದನ್ನು ಮೂರು ದಿನಗಳವರೆಗೆ ವಿಸ್ತರಿಸಲಾಗಿತ್ತು.

ವಿಚಾರಣೆಯ ಸಂದರ್ಭದಲ್ಲಿ ಅಪ್ರಾಪ್ತ ಮಗನ ಪರೀಕ್ಷೆಯ ಆಧಾರದ ಮೇಲೆ ಮಧ್ಯಂತರ ಜಾಮೀನು ನೀಡುವಂತೆ ಕವಿತಾ ಪರ ವಕೀಲ ನಿತೇಶ್ ರಾಣಾ ಕೋರಿದರು.

ದೆಹಲಿಯ ವಿಚಾರಣಾ ನ್ಯಾಯಾಲಯ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ಏಪ್ರಿಲ್ 1 ರಂದು ವಿಚಾರಣೆ ನಡೆಸಲಿದೆ.

Advertisement

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕೆ ಕವಿತಾ ಅವರನ್ನು ಮಾರ್ಚ್ 15 ರಂದು ಜಾರಿ ನಿರ್ದೇಶನಾಲಯವು ಬಂಧಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next