Advertisement

ಜನವರಿಯಲ್ಲಿ ಬೃಹಸ್ಪತಿ

11:51 AM Dec 26, 2017 | |

ರಾಕ್‌ಲೈನ್‌ ವೆಂಕಟೇಶ್‌ ನಿರ್ಮಿಸಿರುವ “ಬೃಹಸ್ಪತಿ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್‌ ಮಂಡಳಿ ಯು ಅರ್ಹತಾ ಪತ್ರವನ್ನು ನೀಡಿದೆ. ಚಿತ್ರ ಜನವರಿ ಮೊದಲ ವಾರದಲ್ಲಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. 

Advertisement

ನಂದಕಿಶೋರ್‌ ನಿರ್ದೇಶನದ ಈ ಚಿತ್ರಕ್ಕೆ ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್‌ ಸಂಕಲನ, ಮುರಳಿ ನೃತ್ಯ ನಿರ್ದೇಶನ, ರವಿವರ್ಮ, ಥ್ರಿಲ್ಲರ್‌ ಮಂಜು ಸಾಹಸ ನಿರ್ದೆಶಕ ಹಾಗೂ ಇಸ್ಮಾಯಿಲ್‌ ಕಲಾನಿರ್ದೇಶನವಿರುವ ಈ ಚಿತ್ರಕ್ಕೆ ಯೋಗಾನಂದ್‌ ಮುದ್ದಾನ್‌ ಸಂಭಾಷಣೆ ಬರೆದಿದ್ದಾರೆ.

ಕವಿರಾಜ್‌, ನಾಗೇಂದ್ರಪ್ರಸಾದ್‌, ಯೋಗಾನಂದ್‌ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ಮನೋರಂಜನ್‌ ರವಿಚಂದ್ರನ್‌ ಅವರು ನಾಯಕರಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಕನ್ನಿಕಾ, ಸಿತಾರ, ಸಾಯಿಕುಮಾರ್‌, ಅವಿನಾಶ್‌, ಸಾಧುಕೋಕಿಲ, ವೀಣಾಸುಂದರ್‌ ಮುಂತಾದವರಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next