Advertisement

ಕೆಆರ್‌ಎಸ್‌ನಲ್ಲಿ ಬೋನಿಗೆ ಬಿದ್ದ ಚಿರತೆ

05:19 PM Feb 12, 2021 | Team Udayavani |

ಶ್ರೀರಂಗಪಟ್ಟಣ: ತಾಲೂಕಿನ ಕೆಆರ್‌ಎಸ್‌ ಸಮೀಪ ಬೃಂದಾವನದ ಆಸುಪಾಸಿನಲ್ಲಿ ಸಂಚಾರ ಮಾಡುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ.

Advertisement

ಚಿರತೆ ಸೆರೆಗೆ ಬಲೆ ಬೀಸಿ ನಾಲೆ ಏರಿ ಮೇಲೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಕೆಆರ್‌ಎಸ್‌ನ ದಕ್ಷಿಣ ಗೇಟ್‌ ಬಳಿ ಮೊತ್ತೂಂದು ಚಿರತೆ ಇರುವ ಶಂಕೆ ವ್ಯಕ್ತವಾಗಿದ್ದು, ಅಲ್ಲಿಯೂ ಚಿರತೆ ಸೆರೆಗೆ ಬೋನು ಇಡಲಾಗಿದೆ. ಈಗ ಹಿಡಿದಿರುವ ಚಿರತೆ ಯನ್ನು ವೈಲ್ಡ ಲೈಫ್ ಅರಣ್ಯಕ್ಕೆ ಬಿಡಲಾಗುವುದು ಎಂದು ಆರ್‌ಎಫ್ಒ ಪ್ರಮೀಳಾ ತಿಳಿಸಿದ್ದಾರೆ.

ಕಳೆದ ವಾರದ ಹಿಂದೆ ಕೆಆರ್‌ಎಸ್‌ ಬೃಂದಾವನದ ದಕ್ಷಿಣ ಗೇಟ್‌ ಬಳಿಯಲ್ಲಿ ರಾತ್ರಿ ಹೊತ್ತಿನಲ್ಲಿ ಬೃಂದಾವನದಲ್ಲಿ ಚಿರತೆ ಸಂಚಾರದ ದೃಶ್ಯ ಸಿಸಿ ಟಿವಿಯಲ್ಲಿ ಕಾಣಿಸಿಕೊಂಡು ಕೆಆರ್‌ಎಸ್‌ ಬೃಂದಾವನಕ್ಕೆ ಬರುವ ಪ್ರವಾಸಿಗರು ಹಾಗೂ ಕೆಆರ್‌ಎಸ್‌ ಸುತ್ತಮುತ್ತಲ ಗ್ರಾಮಗಳ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ಹಾಗೂ ಗ್ರಾಪಂ ಸದಸ್ಯರು ಮುನ್ನೆಚ್ಚರಿಕೆ ತೆಗೆದುಕೊಂಡು ಸಾರ್ವಜನಿಕರಲ್ಲಿ ಮಾಹಿತಿ ನೀಡಿ ಎಚ್ಚರಿಸಿದರು.

ಈ ಬಗ್ಗೆ ಉದಯವಾಣಿ ಪತ್ರಿಕೆಯಲ್ಲಿ ಕೆಆರ್‌ಎಸ್‌ ಬೃಂದಾವನ ಅಂಗಳದಲ್ಲಿ ಚಿರತೆ ಪ್ರತ್ಯಕ್ಷ ಎಂದು ವರದಿ ಪ್ರಕಟವಾಗಿತ್ತು. ಈ ಬಗ್ಗೆ ಎಚ್ಚೆತ್ತ ಅರಣ್ಯ ಇಲಾಖೆ ಅಧಿಕಾರಿಗಳು ಬೃಂದಾವನದ ದಕ್ಷಿಣ ಗೇಟ್‌ ಬಳಿಯಲ್ಲಿ ಬೋನು ಇಟ್ಟು ನಾಯಿಕಟ್ಟಿ ಚಿರತೆ ಸೆರೆಗಾಗಿ ಕಾಯುತ್ತಿದ್ದರು. ಇದೀಗ ಒಂದು ಚಿರತೆ ಸೆರೆಯಾಗಿದೆ. ಮತ್ತೂಂದು ಚಿರತೆ ಇರುವ ಶಂಕೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವ್ಯಕ್ತಪಡಿಸಿದ್ದು, ಚಿರತೆ ಹಿಡಿಯಲು ಬೋನ್‌ ಇಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿ ಪ್ರಮೀಳಾ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next