Advertisement

Shimoga; ಕಾನೂನು ಹೋರಾಟ ಮಾಡ್ತಾರೆ: ಈಶ್ವರಪ್ಪ ಪರ ಯಡಿಯೂರಪ್ಪ ಬ್ಯಾಟಿಂಗ್

12:56 PM Feb 10, 2024 | Team Udayavani |

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ ನವರು ಅಪಾರ್ಥ ಕಲ್ಪಿಸುತ್ತಿದ್ದಾರೆ. ಟೀಕೆ ಟಿಪ್ಪಣಿ ಮಾಡುತ್ತಿರುವುದಕ್ಕೂ ಈಶ್ವರಪ್ಪ ಹೇಳಿಕೆಗೆ ಸಂಬಂಧವಿಲ್ಲ. ಈಶ್ವರಪ್ಪ ಹೇಳಿರುವುದು ಹೊಸ ಕಾನೂನು ತನ್ನಿ ಎಂದು. ಆದರೆ ಕಾಂಗ್ರೆಸ್ ನವರು ಅದನ್ನು ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪನವರು ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ಐಆರ್ ಹಾಕಲಿ, ತೊಂದರೆಯಿಲ್ಲ. ತಪ್ಪು ಕಲ್ಪನೆ ಮಾಡಿಕೊಂಡು ಎಫ್ಐಆರ್ ಹಾಕುವುದು ಸರಿಯಲ್ಲ. ಈಶ್ವರಪ್ಪ ಕಾನೂನು ಹೋರಾಟ ಮಾಡುತ್ತಾರೆ ಎಂದರು.

ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಏನು ಬೇಕಾದರೂ ಹೇಳಿಕೆ ಕೊಡುತ್ತಾರೆ. ದೆಹಲಿಗೆ ಶಾಸಕರನ್ನು ಕರೆದುಕೊಂಡು ಹೋಗಿ ರಾಜಕೀಯ ಡೊಂಬರಾಟ ಮಾಡುವ ಅವಶ್ಯಕತೆ ಇರಲಿಲ್ಲ. ಸಿದ್ದರಾಮಯ್ಯ ಬಗ್ಗೆ ಹೆಚ್ಚು ಮಾತಾನಾಡುವುದಿಲ್ಲ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next