Advertisement

ಬಿಎಸ್‌ವೈ ದೆಹಲಿಗೆ 

06:00 AM Sep 08, 2018 | Team Udayavani |

ಬೆಂಗಳೂರು: ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ
ಅವರು ದೆಹಲಿಗೆ ತೆರಳಿದ್ದಾರೆ.

Advertisement

ಶನಿವಾರದಿಂದ ಎರಡು ದಿನ ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಎಸ್‌.ಎಂ, ಕೃಷ್ಣ ಸಹ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಕಾರ್ಯಕಾರಿಣಿಯಲ್ಲಿ ಪ್ರಸಕ್ತ ರಾಜಕೀಯ ವಿದ್ಯಮಾನ, ರಾಜ್ಯಗಳಲ್ಲಿ ಚುನಾವಣೆ ಎದುರಿಸಲು ಮಾಡಿಕೊಂಡಿರುವ
ಸಿದ್ಧತೆ, ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಗುವುದು. ಈ ಸಂದರ್ಭದಲ್ಲಿ ಬಿ.ಎಸ್‌.
ಯಡಿಯೂರಪ್ಪ ಅವರು ಅಮಿತ್‌ ಶಾ ಜತೆ ಪ್ರತ್ಯೇಕವಾಗಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸುವ
ಸಾಧ್ಯತೆಯಿದೆ ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next