Advertisement

ಯಡಿಯೂರಪ್ಪ ಅವರ ಶಕ್ತಿ ಏನೆಂದು ರಾಜ್ಯದ ಜನರಿಗೆ ಗೊತ್ತು: ಸಚಿವ ಬೊಮ್ಮಾಯಿ

12:01 PM Jun 20, 2020 | sudhir |

ಚಿತ್ರದುರ್ಗ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಶಕ್ತಿ ಏನು ಅನ್ನೋದನ್ನು ಕಾಲಕಾಲಕ್ಕೆ ರಾಜ್ಯದ ಜನತೆ ತೋರಿಸಿದ್ದಾರೆ. ಇದೇ ಕಾರಣಕ್ಕೆ ಸಿದ್ದರಾಮಯ್ಯ ಈಗ ವಿರೋಧ ಪಕ್ಷದ ನಾಯಕರಾಗಿ ಕುಳಿತಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

Advertisement

ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಕೇಂದ್ರದಿಂದ ಅತೀ ಹೆಚ್ಚು ಅನುದಾನ ತಂದಿದ್ದಾರೆ. ಜಿಎಸ್ ಟಿಗೆ ಸಂಬಂಧಿಸಿ 4300 ಕೋಟಿ ರೂ ಅನುದಾನ ತಂದಿದ್ದಾರೆ ಎಂದರು.

ವಿಧಾನ ಪರಿಷತ್ ಟಿಕೇಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಎಚ್‌. ವಿಶ್ವನಾಥ್ ಅಸಮಾಧಾನಗೊಂಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು ವಿಶ್ವನಾಥ್ ಗೆ ಸಿಎಂ ಮೇಲೆ ವಿಶ್ವಾಸ ಇದೆ ಎಂದರು.

ಕೋವಿಡ್ ಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆ

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ವಿಚಾರವಾಗಿ ಮಾತನಾಡಿದ ಸಚಿವರು ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.

Advertisement

ಈವರೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.‌ ಆದರೆ, ಈಗ ಚಿಕಿತ್ಸೆಗೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿದೆ.

ಈ ನಿಟ್ಟಿನಲ್ಲಿ ಕಳೆದ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿದ್ದು, ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಬೆಡ್ ಮೀಸಲಿಡಬೇಕು ಎಂದು ಸೂಚಿಸಲಾಗಿದೆ ಇದಕ್ಕೆ ತಗುಲುವ ವೆಚ್ಚದ ಪಟ್ಟಿ ಕೊಟ್ಟಿದ್ದಾರೆ.‌ ಮುಂದಿನ ಗುರುವಾರದ ಕ್ಯಾಬಿನೆಟ್ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next